Webdunia - Bharat's app for daily news and videos

Install App

ಸುಮಲತಾಗೆ ಬೆಂಬಲಿಸಿದ ಕೆಪಿಸಿಸಿ ಸದಸ್ಯನನ್ನು ಉಚ್ಛಾಟನೆ ಮಾಡಿದ ಕಾಂಗ್ರೆಸ್

Webdunia
ಶನಿವಾರ, 23 ಮಾರ್ಚ್ 2019 (07:08 IST)
ಮಂಡ್ಯ : ಮಂಡ್ಯ ಲೊಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದ್ದ  ಸಚಿವ ಎಂ. ಬಿ. ಪಾಟೀಲ್ ಆಪ್ತ ಎಂದೇ ಗುರುತಿಸಿಕೊಂಡಿದ್ದ ಕೈ ಮುಖಂಡ ಸಚ್ಚಿದಾನಂದರನ್ನು ಕೆಪಿಸಿಸಿ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ.


ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಖೀಲ್ ಕುಮಾರ್ ಸ್ವಾಮಿಗೆ ಬೆಂಬಲಿಸುವಂತೆ ಸೂಚಿಸಿದ್ದರು.  ಆದರೆ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಬಹಿರಂಗವಾಗಿಯೇ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯ ಸ್ಥಾನದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಸಚ್ಚಿದಾನಂದ 'ನನ್ನನ್ನು ಉಚ್ಚಾಟನೆ ಮಾಡಿದ್ರೆ ಪರಿಹಾರ ಸಿಗೋಲ್ಲ, ಜಿಲ್ಲೆಯ ವಿಚಾರದಲ್ಲಿ ನನಗೆ ಸ್ವಾಭಿಮಾನ ಮುಖ್ಯ, ನಾನೊಬ್ಬನೇ ಅಲ್ಲಾ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಪರ ಇದ್ದಾರೆ ಹಾಗಾದರೆ ಅವರೆನ್ನೆಲ್ಲಾ ಉಚ್ಚಾಟನೆ ಮಾಡಲಿ ನೋಡೋಣ, ಅದೇನೆ ಇರಲಿ ಸುಮಲತಾ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments