ದಂಪತಿಗಳನ್ನ ಬೆದರಿಸಿ ಹಣ ಸುಲಿಗೆ ಮಾಡಿದ ಕಾನ್ಸ್ಟೇಬಲ್ ಸಸ್ಪೆಂಡ್

Webdunia
ಶುಕ್ರವಾರ, 3 ಫೆಬ್ರವರಿ 2023 (18:50 IST)
ದಂಪತಿಗಳನ್ನ ಬೆದರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನ ಸೇವೆಯಿಂದ ವಜಾಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ‌.ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟಟೇಬಲ್ ರಾಜೇಶ್ ಹಾಗೂ ಕಾನ್ಸ್ಟೇಬಲ್ ನಾಗೇಶ್ ವಜಾಗೊಂಡ ಸಿಬ್ಬಂದಿಗಳು.
 
ಡಿಸೆಂಬರ್ 8ರ ರಾತ್ರಿ‌ 11 ಗಂಟೆ ಸುಮಾರಿಗೆ ಮಾನ್ಯತಾ ಟೆಕ್​ಪಾರ್ಕ್​ ಬಳಿ ತನ್ನ ಪತ್ನಿಯೊಂದಿಗೆ ನಡೆದುಕೊಂಡು ಬರುತ್ತಿದ್ದ ಕಾರ್ತಿಕ್ ಎಂಬಾತನನ್ನ ತಡೆದಿದ್ದ ಹೊಯ್ಸಳ ಸಿಬ್ಬಂದಿ, ಆಧಾರ್ ಕಾರ್ಡ್ ಸೇರಿದಂತೆ ಐಡೆಂಟಿಟಿ ದಾಖಲೆಗಳನ್ನ ಪರಿಶೀಲಿಸಿದ್ದರು. 'ಮನೆಯ ಸಮೀಪದಲ್ಲೇ ಇದ್ದೇವೆ, ಮೇಲಾಗಿ 11 ಗಂಟೆಯ ಸುಮಾರಿಗೆ ಓಡಾಟಕ್ಕೆ ನಿರ್ಬಂಧವಿದೆಯೇ?' ಎಂದು ಪ್ರಶ್ನಿಸಿದಾಗ, 3 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡುವುದಿಲ್ಲ ಎಂದಾಗ ಬೆದರಿಕೆ ಹಾಕಿ, 1 ಸಾವಿರ ರೂಗಳನ್ನ ಡಿಜಿಟಲ್ ಪೇಮೆಂಟ್ ಮೂಲಕ ಪಡೆದು ಸ್ಥಳದಿಂದ ತೆರಳಿದ್ದರು. ಹೊಯ್ಸಳ ಸಿಬ್ಬಂದಿಗಳ ನಡೆಯ ಕುರಿತು ಟ್ವೀಟ್​​ ಮಾಡಿದ್ದ ಕಾರ್ತಿಕ್, ತಮಗಾದ ಅನುಭವ ಹಂಚಿಕೊಂಡಿದ್ದರು. ಬಳಿಕ ಇಬ್ಬರೂ ಸಿಬ್ಬಂದಿಯನ್ನ ಅಮಾನತ್ತುಗೊಳಿಸಿ ಆದೇಶಿಸಿದ್ದ ಈಶಾನ್ಯ ವಿಭಾಗದ ಡಿಸಿಪಿ ಇಲಾಖಾ ತನಿಖೆಗೆ ಆದೇಶಿಸಿದ್ದರು.
 
ಇಬ್ಬರೂ ಸಿಬ್ಬಂದಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ‌
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಮುಂದಿನ ಸುದ್ದಿ
Show comments