Webdunia - Bharat's app for daily news and videos

Install App

ಮಠಗಳ ನಿಯಂತ್ರಣ ವಿಷಯ ಮೇಲ್ಮನೆಯಲ್ಲಿ ಪ್ರಸ್ತಾಪ, ಬಿಜೆಪಿ– ಜೆಡಿಎಸ್ ಸಭಾತ್ಯಾಗ

Webdunia
ಗುರುವಾರ, 8 ಫೆಬ್ರವರಿ 2018 (15:00 IST)
ಮಠ-ಮಂದಿರ ಧಾರ್ಮಿಕ ಸಂಸ್ಥೆಗಳನ್ನು ನಿಯಂತ್ರಣಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಮೇಲ್ಮನಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಪ್ರತ್ಯೇಕವಾಗಿ ಸಭಾತ್ಯಾಗ ನಡೆಸಿದರು.
 
ಧಾರ್ಮಿಕ ಕೇಂದ್ರಗಳನ್ನು ಹತೋಟಿಗೆ ತರಲು ಸರ್ಕಾರ ಹೊರಡಿಸಿರುವ ಸುತ್ತೋಲೆ ಮೇಲ್ಮನೆಯಲ್ಲಿ ಪ್ರಸ್ತಾಪಕ್ಕೆ ಬಂದು ಆರೋಪ– ಪ್ರತ್ಯಾರೋಪ ನಡೆಯಿತು.
 
ನಿಲುವಳಿ ಸೂಚನೆ ಪ್ರಸ್ತಾಪದಡಿ ಮಾತನಾಡಿದ ಈಶ್ವರಪ್ಪ, ಸರ್ಕಾರ ಮಠಗಳನ್ನು ನಿಯಂತ್ರಣ ಮಾಡಲು ಹೊರಟಿರುವುದನ್ನು ಖಂಡಿಸಿ, ತೀವ್ರ ತರಾಟೆ ತೆಗೆದುಕೊಂಡರು. ಮಠಗಳು ದೇವಾಲಯಗಳು ಇದ್ದಂತೆ, ಮಠಾಧೀಶರು ದೇವರಿದ್ದಂತೆ ಸಮಾಜ ಸೇವೆಯಲ್ಲಿ ತೊಡಗಿರುವ ಮಾಡುವವರ ಮೇಲೆಯೂ ಕಣ್ಣಿಡುವ ಮೂಲಕ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ ಎಂದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮಠಗಳನ್ನು ನಿಯಂತ್ರಣ ಮಾಡುವ ಉದ್ದೇಶವಿಲ್ಲ. ಸುತ್ತೋಲೆಯನ್ನು ಹಿಂದಕ್ಕೆ ಪಡೆಯಲು ಸೂಚಿಸಲಾಗಿದೆ ಎಂದು ತಿಳಿಸಿದರು.
 
ಸರ್ಕಾರದೀ ಆದೇಶದಿಂದ ಮಠಾಧೀಶರಿಗೆ ಆಘಾತವಾಗಿದೆ ಎಂದು ಈಶ್ವರಪ್ಪ ಆತಂಕ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸ್ವಾಮೀಜಿಗಳಿಗೆ ಆಘಾತವಾಗಿಲ್ಲ. ಬಿಜೆಪಿಯವರಿಗೆ ರಾಜಕೀಯವಾಗಿ ಆಘಾತವಾಗಿದೆ. ನೀವು ಮಾಡಿದ್ದರೆ ಹಿಂದೂಪರ, ನಾವು ಮಾಡಿದರೆ ಹಿಂದೂ ವಿರೋಧ ಎಂದು ಹೇಳಿದರು.
 
ಇದನ್ನು ಒಪ್ಪದ ಬಿಜೆಪಿ ಸದಸ್ಯರು, ಈ ಹಂತದಲ್ಲಿ ಸರ್ಕಾರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ ಮಾಡಿದರು. ಮಠಾಧೀಶರಿಗೆ ಆತಂಕವಾಗಿದ್ದು, ಆತಂಕವನ್ನು ದೂರ ಮಾಡುವ ಸಲುವಾಗಿ ಸಭಾತ್ಯಾಗ ಮಾಡುವುದಾಗಿ ಜೆಡಿಎಸ್‌ನ ಶ್ರೀಕಂಠೇಗೌಡ ತಿಳಿಸಿ ಸದಸ್ಯರೊಂದಿಗೆ ಹೊರನಡೆದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments