ಮತಾಂತರಕ್ಕೆ ಕ್ರೈಸ್ತ ಧರ್ಮದ ಅವನತಿಯೇ ಕಾರಣ : ಸಂಸದ ಸಿಂಹ

Webdunia
ಗುರುವಾರ, 30 ಡಿಸೆಂಬರ್ 2021 (20:12 IST)
ಯೂರೋಪಿಯನ್ ದೇಶಗಳಲ್ಲಿ ಕ್ರೈಸ್ತ ಧರ್ಮ ನೆಲ ಕಚ್ಚುತ್ತಿರುವುದಕ್ಕೆ ದೇಶದಲ್ಲಿ ಮತಾಂತರದ ಸದ್ದು ಹೆಚ್ಚಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಯೂರೋಪಿಯನ್ ದೇಶಗಳಲ್ಲಿ ಚರ್ಚ್ ಗಳಿಗೆ ಯಾರು ಹೋಗುತ್ತಿಲ್ಲ.ಚರ್ಚ್ ಗಳು ಅಲ್ಲಿ ಮಾರಾಟಕ್ಕಿವೆ” ಎಂದು, ಮತಾಂತರ ಕಾಯ್ದೆ ಜಾರಿಗೆ ವಿರೋಧಿಸುತ್ತಿರುವ ಬಿಷಪ್ ಗಳು, ಫಾದರ್ ಗಳು ಸೇರಿ ಕಾಯ್ದೆ ವಿರೋಧಿಸುತ್ತಿರುವವರ ವಿರುದ್ದ ವಾಗ್ದಾಳಿ ನಡೆಸಿದರು.
”ಜನರನ್ನು ಮಂಗ್ಯಾ ಮಾಡಿ ಮತಾಂತರ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ.ಚಿಕಿತ್ಸೆ ಕೊಡಿಸಿ ರೋಗ ವಾಸಿ ಮಾಡಿಸುತ್ತಾರೆ. ನಂತರ ಏಸುವಿನ ಪ್ರಾರ್ಥನೆ ಮಾಡಿಸುತ್ತಾರೆ. ಏಸುವಿನಿಂದ ಗುಣ ಆಯ್ತು ಅಂತಾ ಮೋಸದಿಂದ ಮತಾಂತರ ಮಾಡ್ತಾರೆ. ನಿಮ್ಮ ಆಸ್ಪತ್ರೆಗಳನ್ನ ಬಂದ್ ಮಾಡಿ. ಬರೀ ಏಸುವಿನ ದೇವಾಲಯ ಕಟ್ಟಿಸಿ ನೋಡೋಣ” ಎಂದು ಸವಾಲು ಹಾಕಿದರು.
“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಯ್ದೆ ವಾಪಸ್” ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಇಂತಹ ಮನಸ್ಥಿತಿಯಿಂದಲೇ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮಾದರಿ ಸರ್ಕಾರ ಬರುತ್ತದೆ. ಇದು ಜನರಿಗೆ ಗೊತ್ತಿದೆ ಆದ್ದರಿಂದ 2023ರಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments