Webdunia - Bharat's app for daily news and videos

Install App

​ಕಾರಿನಲ್ಲಿ ಅನಾಥವಾಗಿತ್ತು ಶವ

Webdunia
ಮಂಗಳವಾರ, 28 ಡಿಸೆಂಬರ್ 2021 (20:32 IST)
Photo Courtesy: Google
ಎರಡು ತಿಂಗಳ ಹಿಂದೆ ಕಂಪನಿ ಕ್ಲೋಸ್ ಮಾಡಿದ್ದ ವ್ಯಕ್ತಿಯ ಬದುಕು ಕೂಡ ಇದೀಗ ಅಂತ್ಯವಾಗಿದ್ದು, ಎಸ್ಟೀಮ್​ ಕಾರಿನಲ್ಲಿ ಶವ ಅನಾಥವಾಗಿರುವುದು ಕಂಡುಬಂದಿದೆ. ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರ ರಸ್ತೆಯಲ್ಲಿ ಈ ಶವ ಪತ್ತೆಯಾಗಿದೆ.
ಶವ ಕಂಡುಬಂದಿರುವ ಮಾರುತಿ ಎಸ್ಟೀಮ್​ ಕಾರಿನ ಎಲ್ಲ ಗ್ಲಾಸ್​ ಕ್ಲೋಸ್ ಆಗಿದ್ದು, ಸಾವಿಗೀಡಾದ ವ್ಯಕ್ತಿ ಬೆಂಗಳೂರಿನ ಡೇರಿ ಸರ್ಕಲ್​ ನಿವಾಸಿ ಪಾರ್ಥಸಾರಥಿ ಎಂದು ಗುರುತಿಸಲಾಗಿದೆ. ಸಾವಿಗೂ ಮುನ್ನ ಈ ವ್ಯಕ್ತಿ ಬೇಸರದಲ್ಲಿ ಗದ್ಗದಿತರಾಗಿ ತಮಿಳಿನಲ್ಲಿ ಮಾತನಾಡುತ್ತ ನೋವು ತೋಡಿಕೊಂಡ ವಿಡಿಯೋ ತುಣುಕುಗಳು ಕೂಡ ಲಭಿಸಿವೆ.
ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಕಂಪನಿಯೊಂದನ್ನು ಹೊಂದಿದ್ದ ಇವರು ನಷ್ಟದಿಂದಾಗಿ ಎರಡು ತಿಂಗಳ ಹಿಂದೆ ಅದನ್ನು ಕ್ಲೋಸ್ ಮಾಡಿದ್ದರು. ಅವರ ಶವ ಕಾರಿನ ಡ್ರೈವರ್ ಸೀಟ್​ನಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮದ್ಯ ಹಾಗೂ ನೀರಿನ ಬಾಟಲಿ ಪತ್ತೆಯಾಗಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments