Webdunia - Bharat's app for daily news and videos

Install App

ಬೆಕ್ಕಿಗೆ ಮಗಳ ಸ್ಥಾನ ಕೊಟ್ಟ ದಂಪತಿ

Webdunia
ಗುರುವಾರ, 22 ಡಿಸೆಂಬರ್ 2022 (18:08 IST)
ಬೆಕ್ಕು ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ‌. ಅದರ ತುಂಟಾಟ, ಮನುಷ್ಯರೊಟ್ಟಿಗೆ ಒಗ್ಗುವ ಪರಿಯೇ ಒಂದು ವಿನೋಧ. ಆದರೆ, ಇಲ್ಲೊಂದು ಬೆಕ್ಕು ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು ಮನೆಯ ಮಗಳಾಗಿ ಬದಲಾಗಿದೆ‌. ಹೌದು‌.‌ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ಶಿಕ್ಷಕರಾಗಿರುವ ವೆಂಕಟರಮಣಶೆಟ್ಟಿ ಹಾಗೂ ಇವರ ಪತ್ನಿ ನಿರ್ಮಲಾ ಅವರಿಗೆ ಬೆಕ್ಕುಗಳೆಂದರೆ ಬಲು ಅಕ್ಕರೆ ಅಷ್ಟೇ ಅಲ್ಲ, ಮನೆಯ ಸದಸ್ಯನ ಸ್ಥಾನವನ್ನು ಕೊಟ್ಟಿದ್ದಾರೆ. ಅದರಂತೆ, ಮಗು ಹೆರಲು ಸಿದ್ಧಳಾದ ಸುಬ್ಬಿಗೆ ಸೀಮಂತ ಶಾಸ್ತ್ರ ಮಾಡಿ ಗಮನ ಸೆಳೆದಿದ್ದಾರೆ. ವೆಂಕಟರಮಣ ಹಾಗೂ ನಿರ್ಮಲಾ ಅವರಿಗೆ ಇಬ್ಬರು ಪುತ್ರರಿದ್ದು ಮಗಳಿಲ್ಲ ಎಂಬ ಕೊರಗನ್ನು ಈ ಬೆಕ್ಕು ನಿವಾರಿಸಿದೆಯಂತೆ. ಆದ್ದರಿಂದಲೇ ಬೆಕ್ಕು ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಅದಕ್ಕಿಷ್ಟವಾದ ಆಹಾರ, ತಿನಿಸು ಕೊಟ್ಟು ವಿಶೇಷ ಆರೈಕೆ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳಿಲ್ಲದ ಕಾರಣ ಪ್ರೀತಿಯಿಂದ ಹೆಣ್ಣು ಬೆಕ್ಕನ್ನು ಸಾಕಿ ಅದಕ್ಕೆ ಪ್ರೀತಿಯಿಂದ ಸುಬ್ಬಿ ಎಂದು ಹೆಸರಿಡಲಾಗಿದೆ,  ಪ್ರತಿನಿತ್ಯ ಅದಕ್ಕೆ ಇಷ್ಟವಾದ  ತಿನಿಸನ್ನು ಕೊಟ್ಟು ಸ್ನಾನ ಮಾಡಿಸಿ ಅಗತ್ಯ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಕ್ಕಳಿಗೆ ಸೀಮಂತ ಮಾಡುವ ಹಾಗೆ ಫಲ ತಾಂಬೂಲ, ತಿನಿಸುಗಳನ್ನು ಇಟ್ಟು ಹೊಸ ಬಟ್ಟೆ ತೊಡಿಸಿ  ಸಂಪ್ರದಾಯದಂತೆ ಶಾಸ್ತ್ರ ಮಾಡಿ ಆರತಿ ಬೆಳಗಿ ಶುಭ ಹಾರೈಸಿದ್ದಾರೆ. ವೇಗದ ಬದುಕಿನಲ್ಲಿ ಪ್ರಾಣಿಗಳನ್ನು ಸಾಕಿ-ಸಲುಹುವುದೇ ಬೇಡ ಎಂಬುವವರ ನಡುವೆ ಬೆಕ್ಕಿಗೆ ಮಗಳ ಸ್ಥಾನ ಕೊಟ್ಟು ಸೀಮಂತ ಮಾಡಿರುವುದು ನಿಜಕ್ಕೂ ವಿಶೇಷ ಹಾಗೂ ಮಾದರಿ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments