Webdunia - Bharat's app for daily news and videos

Install App

ಸೈಬರ್ ಕ್ರೈಂ ಮುಂದೆ ಹಾಜರಾಗಲು ಬಿಎಸ್‌ವೈ, ಅನಂತ್‌ಕುಮಾರ್‌ಗೆ ಕೋರ್ಟ್ ಆದೇಶ

Webdunia
ಶನಿವಾರ, 6 ಮೇ 2017 (18:59 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವೆ ನಡೆದ ಸಂಭಾಷಣೆ ಸಿಡಿ ಕುರಿತಂತೆ ಧ್ವನಿಪರೀಕ್ಷೆಗಾಗಿ ಸೈಬರ್ ಕ್ರೈಂ ಪೊಲೀಸರ ಮುಂದೆ ಹಾಜರಾಗುವಂತೆ ಯಡಿಯೂರಪ್ಪ ಅನಂತ್‌ಕುಮಾರ್‌ಗೆ ಕೋರ್ಟ್ ನಿರ್ದೇಶನ ನೀಡಿದೆ.
 
ಹೈಕಮಾಂಡ್‌ಗೆ ಕಪ್ಪು ಕಾಣಿಕೆ ನೀಡಿದ ಕುರಿತ ಸಂಭಾಷಣೆಯಿರುವ ಸಿಡಿ ಕುರಿತಂತೆ ತನಿಖೆ ನಡೆಸಿ ಎಂದು  ಕಾಂಗ್ರೆಸ್ ಮುಖಂಡರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.
 
ಧ್ವನಿ ಪರೀಕ್ಷೆಗೆ ಹಾಜರಾಗುವಂತೆ ಯಡಿಯೂರಪ್ಪ ಮತ್ತು ಅನಂತ್‌ಕುಮಾರ್‌ಗೆ ಸೈಬರ್ ಕ್ರೈಂ ಪೊಲೀಸರು ಸೂಚನೆ ನೀಡಿದ್ದರು. ಆದರೆ, ಧ್ವನಿ ಪರೀಕ್ಷೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಇಬ್ಬರು ನಾಯಕರಿಗೆ 1ನೇ ಎಸಿಎಂಎಂ ಕೋರ್ಟ್, ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿದೆ.
 
ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವೆ ನಡೆದ ಸಂಭಾಷಣೆ ಸಿಡಿ ಸಿಡಿಯನ್ನು ಬಿಡುಗಡೆ ಮಾಡಿದ್ದರು 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments