ಇಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

Webdunia
ಭಾನುವಾರ, 3 ಅಕ್ಟೋಬರ್ 2021 (22:04 IST)
ಬೆಂಗಳೂರು: ಇಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶನಿವಾರ ರಾತ್ರಿ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸಿದ್ದಾರ್ಥ ಲೇಔಟ್ ನಿವಾಸಿ ಮೆಹಬೂಬ್(48) ಕೊಲೆಯಾದ ವ್ಯಕ್ತಿ.
ಗೆದ್ದಲಹಳ್ಳಿಯಲ್ಲಿ ಮೆಹಬೂಬ್ ದ್ವಿಚಕ್ರ ವಾಹನಗಳ ಗ್ಯಾರೇಜ್ ಇಟ್ಟುಕೊಂಡಿದ್ದು, ಅಲ್ಲಿ ಶನಿವಾರ ರಾತ್ರಿ ಕೆಲಸ ನಿರ್ವಹಿಸುತ್ತಿದ್ದರು. ಆಗ ಅವರ ಬೀಗರಾದ ನಜೀರ್ ಅಹಮದ್(53) ಎಂಬುವರು ಅಲ್ಲಿಗೆ ಬಂದಿದ್ದಾನೆ. 
ಆಗ ಇಬ್ಬರ ನಡುವೆ ಜಗಳವಾಗಿದೆ. ಜಗಳದ ಒಂದು ಹಂತದಲ್ಲಿ ನಜೀರ್ ಅಹಮದ್ ದೊಣ್ಣೆಯಿಂದ ಮೆಹಬೂಬ್ ಅವರ ತಲೆಗೆ ಹೊಡೆದಿದ್ದಾನೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಮೆಹಬೂಬ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.
ಹೆಣ್ಣೂರು ಠಾಣೆ ಪೊಲೀಸರು ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ನಜೀರ್ ಅಹಮದ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮೆಹಬೂಬ್ ಮಗಳನ್ನು ನಜೀರ್ ಅಹಮದ್ ಮಗನಿಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ, ಮೆಹಬೂಬ್ ಮತ್ತು ನಜೀರ್ ಅಹಮದ್ ನಡುವಿನ ಜಗಳಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹ ಇರಬಹುದೆಂದು ಹೆಣ್ಣೂರು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments