Select Your Language

Notifications

webdunia
webdunia
webdunia
webdunia

ಪೊಲೀಸ್ ಇನ್ಪರ್ಮರ್ ಆಗಿದ್ದ ಯುವಕನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

ಪೊಲೀಸ್ ಇನ್ಪರ್ಮರ್  ಆಗಿದ್ದ ಯುವಕನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು
ಬೆಂಗಳೂರು , ಭಾನುವಾರ, 26 ಜನವರಿ 2020 (09:10 IST)
ಬೆಂಗಳೂರು : ಪೊಲೀಸ್ ಇನ್ಪರ್ಮರ್  ಆಗಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕುವೆಂಪು ನಗರದಲ್ಲಿ ನಡೆದಿದೆ.


ಪ್ರಭು ಅಲಿಯಾಸ್ ಅಪ್ಪು(25) ಕೊಲೆಯಾದ ವ್ಯಕ್ತಿ. ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಈತ ಕುವೆಂಪು ನಗರ, ಕಮಲ ನಗರದ ಸುತ್ತಮುತ್ತ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ. ಈತ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆ; ಮಾಣಿಕ್ಯ ಷಾ ಪರೇಡ್ ಮೈದಾನಕ್ಕೆ ಬರುವವರು ತರುವಂತಿಲ್ಲ ಈ ವಸ್ತು