Webdunia - Bharat's app for daily news and videos

Install App

ಮೋಜಿಗಾಗಿ ತುಂಗಭದ್ರಾ ನದಿಗೆ ಜಿಗಿದು, ನೀರುಪಾಲಾಗಿದ್ದ ವೈದ್ಯೆಯ ಮೃತದೇಹ ಪತ್ತೆ

Sampriya
ಗುರುವಾರ, 20 ಫೆಬ್ರವರಿ 2025 (19:31 IST)
ಗಂಗಾವತಿ: ತುಂಗಭದ್ರಾ ನದಿಗೆ 20 ಅಡಿಯಿಂದ ಜಿಗಿದು, ನೀರುಪಾಲಾಗಿದ್ದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯ ವೈದ್ಯೆ ಅನನ್ಯ ಮೋಹನ್​ರಾವ್ ಅವರ ಮೃತದೇಹ ಇಂದು ಪತ್ತೆಯಾಗಿದೆ.

ಅನನ್ಯ ಮೋಹನ್​ರಾವ್ ಅವರು ತಾಲೂಕಿನ ಸಣಾಪುರದ ಸಮೀಪ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಸುಮಾರು 16 ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ. ‌‌

ಮೃತದೇಹವನ್ನು ಹೊರತರುತ್ತಿದ್ದ ಹಾಗೇ ವೈದ್ಯೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳು ನದಿಯಲ್ಲಿ ನಾಪತ್ತೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ, ಬುಧವಾರವೇ ಅನನ್ಯ ತಂದೆ, ತಾಯಿ ಹಾಗೂ ಕುಟುಂಬ ಸದಸ್ಯರು ಆಗಮಿಸಿದ್ದರು.

ಕುಟುಂಬಸ್ಥರ ಸಮ್ಮುಖದಲ್ಲಿಯೇ ಅನನ್ಯ ಮೃತದೇಹದ ಹುಡುಕಾಟ ನಡೆದಿತ್ತು. ಬಳಿಕ ನದಿಯ ದಡದಲ್ಲಿಯೇ ಶವದ ಮರಣೋತ್ತರ ಪರೀಕ್ಷೆ ಮುಗಿಸಿದ ವೈದ್ಯರು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಆ್ಯಂಬುಲೆನ್ಸ್​​ನಲ್ಲಿ ಅನನ್ಯ ಅವರ ಮೃತದೇಹವನ್ನು ಹೈದರಾಬಾದ್​ಗೆ ಕೊಂಡೊಯ್ಯಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments