ಮೋಜಿಗಾಗಿ ತುಂಗಭದ್ರಾ ನದಿಗೆ ಜಿಗಿದು, ನೀರುಪಾಲಾಗಿದ್ದ ವೈದ್ಯೆಯ ಮೃತದೇಹ ಪತ್ತೆ

Sampriya
ಗುರುವಾರ, 20 ಫೆಬ್ರವರಿ 2025 (19:31 IST)
ಗಂಗಾವತಿ: ತುಂಗಭದ್ರಾ ನದಿಗೆ 20 ಅಡಿಯಿಂದ ಜಿಗಿದು, ನೀರುಪಾಲಾಗಿದ್ದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯ ವೈದ್ಯೆ ಅನನ್ಯ ಮೋಹನ್​ರಾವ್ ಅವರ ಮೃತದೇಹ ಇಂದು ಪತ್ತೆಯಾಗಿದೆ.

ಅನನ್ಯ ಮೋಹನ್​ರಾವ್ ಅವರು ತಾಲೂಕಿನ ಸಣಾಪುರದ ಸಮೀಪ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಸುಮಾರು 16 ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ. ‌‌

ಮೃತದೇಹವನ್ನು ಹೊರತರುತ್ತಿದ್ದ ಹಾಗೇ ವೈದ್ಯೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳು ನದಿಯಲ್ಲಿ ನಾಪತ್ತೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ, ಬುಧವಾರವೇ ಅನನ್ಯ ತಂದೆ, ತಾಯಿ ಹಾಗೂ ಕುಟುಂಬ ಸದಸ್ಯರು ಆಗಮಿಸಿದ್ದರು.

ಕುಟುಂಬಸ್ಥರ ಸಮ್ಮುಖದಲ್ಲಿಯೇ ಅನನ್ಯ ಮೃತದೇಹದ ಹುಡುಕಾಟ ನಡೆದಿತ್ತು. ಬಳಿಕ ನದಿಯ ದಡದಲ್ಲಿಯೇ ಶವದ ಮರಣೋತ್ತರ ಪರೀಕ್ಷೆ ಮುಗಿಸಿದ ವೈದ್ಯರು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಆ್ಯಂಬುಲೆನ್ಸ್​​ನಲ್ಲಿ ಅನನ್ಯ ಅವರ ಮೃತದೇಹವನ್ನು ಹೈದರಾಬಾದ್​ಗೆ ಕೊಂಡೊಯ್ಯಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments