Select Your Language

Notifications

webdunia
webdunia
webdunia
Saturday, 12 April 2025
webdunia

ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಮತ್ತೋರ್ವ ಮಹಿಳೆ ಸಾವು, ಸಾವಿನ ಸಂಖ್ಯೆ 13 ಕ್ಕೆ ಏರಿಕೆ

ಮೈಸೂರು
ಮೈಸೂರು , ಭಾನುವಾರ, 16 ಡಿಸೆಂಬರ್ 2018 (11:42 IST)
ಮೈಸೂರು : ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ.


ಎಂ.ಜಿ. ದೊಡ್ಡಿ ನಿವಾಸಿ ಮಗೇಶ್ವರಿ (35) ಸಾವನಪ್ಪಿದ  ಮಹಿಳೆ. ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿ ಮಗೇಶ್ವರಿ ಅಸ್ವಸ್ಥರಾಗಿದ್ದು, ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗೇಶ್ವರಿ ಮೃತಪಟ್ಟಿದ್ದಾರೆ, ಈ ಮೂಲಕ ವಿಷ ಪ್ರಸಾದ ದುರಂತದಲ್ಲಿ ಸಾವಿನ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲಾ ದೇವಸ್ಥಾನ, ಮಠಗಳಲ್ಲಿ ಪ್ರಸಾದ ವಿತರಣೆ ಬಗ್ಗೆ ಎಚ್ಚರ ವಹಿಸಿ - ಸಿಎಂ ಕುಮಾರಸ್ವಾಮಿ ಸೂಚನೆ