Select Your Language

Notifications

webdunia
webdunia
webdunia
webdunia

ಮೋದಿ ಬಂದ ಮೇಲೆ ದೇಶದ ಅಭಿವೃದ್ಧಿ ಹದಗೆಟ್ಟಿದೆ ಎಂದ ಖರ್ಗೆ

ಮೋದಿ ಬಂದ ಮೇಲೆ ದೇಶದ ಅಭಿವೃದ್ಧಿ ಹದಗೆಟ್ಟಿದೆ ಎಂದ ಖರ್ಗೆ
ಕಲಬುರಗಿ , ಸೋಮವಾರ, 10 ಸೆಪ್ಟಂಬರ್ 2018 (16:14 IST)
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಗಂಭೀರವಾಗಿ ಆರೋಪಿಸಿದ್ದಾರೆ.

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ ಬಂದ್ ಅಂಗವಾಗಿ ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಸಂಸದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.

ಪ್ರಧಾನಿಗೆ ಈ ದೇಶದ ಬಡವರ ಬಗ್ಗೆ ಕಾಳಜಿ ಇಲ್ಲ. ಉಳ್ಳವರ ಪರ ಪ್ರಧಾನಿ ಆಡಳಿತ ನಡೆಸುತ್ತಿದ್ದಾರೆ. ಸಾಮಾನ್ಯ ಜನರ ಕಾಳಜಿ ಮರೆತಿರುವ ಪ್ರಧಾನಿ ಅಧಿಕಾರದಲ್ಲಿ ಮುಂದುವರೆಯುವುದು ಹೇಗೆ ಎಂಬ ಚಿಂತನೆಯಲ್ಲಿ ತೊಡಗಿದ್ದಾರೆ ಎಂದು ದೂರಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಭಾರತ್ ಬಂದ್ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತರ ಎಂದ ಬಿಎಸ್ ವೈ