ಕಣವಿಯವರಿಗೆ ಸಂತಾಪ ಸೂಚಿಸಿದ ಗಣ್ಯರು

Webdunia
ಬುಧವಾರ, 16 ಫೆಬ್ರವರಿ 2022 (12:07 IST)
ಬೆಂಗಳೂರು : ಖ್ಯಾತ ಕವಿ ಚನ್ನವೀರ ಕಣವಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದರು.
 
ಅವರನ್ನು ಜ.14ರಂದು ಧಾರವಾಡದ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ.

ಸಾಹಿತ್ಯದ ಮುಖಾಂತರ ಅವರು ತಮ್ಮ ಕಲ್ಪನೆ ಹಾಗೂ ವಾಸ್ತವಾಂಶವನ್ನು ಪರಿಣಾಮಕಾರಿಯಾಗಿ ಬಿಂಬಿಸಿದ ಕವಿ ಆಗಿದ್ದರು. ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಅವರದಾಗಿತ್ತು.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದು, ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments