ಪೊಲೀಸರ ಕಣ್ತಪ್ಪಿಸಿ ಬಂದರೆ ಕಠಿಣ ಕ್ರಮ

Webdunia
ಮಂಗಳವಾರ, 19 ಮೇ 2020 (19:49 IST)
ಕೊರೊನಾ ಸೋಂಕು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ್ದರೂ ಕೆಲವರು ಅನ್ಯಮಾರ್ಗಗಳಿಂದ ಜಿಲ್ಲೆಯ ಒಳಗಡೆ ಪ್ರವೇಶಿಸಿದ್ದು, ಅಂತಹವರ ವಿರುದ್ಧ  ಕಾನೂನು ಕ್ರಮ ಜರುಗಿಸಲಾಗಿವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

ಇತ್ತೀಚೆಗೆ ತುಮಕೂರಿನ ಹುಳಿಯಾರಿನ ಎಚ್‌.ಅಶೋಕ ಎಂಬುವರು ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯ ಕನಕವಳ್ಳಿ‌ಯಿಂದ ಪೊಲೀಸರ ಕಣ್ತಪ್ಪಿಸಿ ಬೆಳಗಾವಿಯ ನಿಪ್ಪಾಣಿಗೆ ಬಂದು, ಚೆಕ್‌ಪೋಸ್ಟ್‌ ಇದ್ದ ಕಾರಣಕ್ಕಾಗಿ ಅಲ್ಲಿಂದ ಸ್ವಲ್ಪ ದೂರ ನಡೆದುಕೊಂಡು ಬಂದು ಹುಳಿಯಾರಿನಿಂದ ಕಾರನ್ನು ತರಿಸಿಕೊಂಡು ಕೆಂಕೆರೆ ಕುದುರೆ ಕಣಿವೆಗೆ ಬಂದಿದ್ದಾರೆ. ಅಲ್ಲಿಗೆ ಕುಟುಂಬದ ಸದಸ್ಯ ಬಂದು ಕಾಡಿನ ದಾರಿಯಲ್ಲಿ ಹುಳಿಯಾರಿನ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಪಾಸ್ ಇಲ್ಲದೆ ಇದ್ದರೂ ಸ್ಥಳೀಯರೆಂದು ತೋಟಕ್ಕೆ ಹೋಗಿರುವುದಾಗಿ ಸುಳ್ಳು ಹೇಳಿ ಚೆಕ್‌ಪೋಸ್ಟ್‌ನಿಂದ ಬಂದಿದ್ದಾರೆ. ಈ ಮೂಲಕ ಕೆಂಪು ವಲಯದ ರಾಜ್ಯಗಳಿಂದ ಕರ್ನಾಟಕದ ಒಳಗೆ ಬಂದಾಗ ಪಾಲಿಸಬೇಕಾದ ನಿಯಮಗಳನ್ನು ಹಾಗೂ ಜಿಲ್ಲೆಯ ಗಡಿಗೆ ಬಂದಾಗ ಪಾಲಿಸಬೇಕಾದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಹಾಗಾಗಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಅವರು ಸಂಚರಿಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರೆತಂದ 4 ಜನರನ್ನು ತುಮಕೂರು ಸರ್ಕಾರಿ ಆಸ್ಪತ್ರೆಯ ನಿಗಾ ಘಟಕಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಮುಂದಿನ ಸುದ್ದಿ
Show comments