Webdunia - Bharat's app for daily news and videos

Install App

ಪೊಲೀಸರ ಕಣ್ತಪ್ಪಿಸಿ ಬಂದರೆ ಕಠಿಣ ಕ್ರಮ

Webdunia
ಮಂಗಳವಾರ, 19 ಮೇ 2020 (19:49 IST)
ಕೊರೊನಾ ಸೋಂಕು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದ್ದರೂ ಕೆಲವರು ಅನ್ಯಮಾರ್ಗಗಳಿಂದ ಜಿಲ್ಲೆಯ ಒಳಗಡೆ ಪ್ರವೇಶಿಸಿದ್ದು, ಅಂತಹವರ ವಿರುದ್ಧ  ಕಾನೂನು ಕ್ರಮ ಜರುಗಿಸಲಾಗಿವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

ಇತ್ತೀಚೆಗೆ ತುಮಕೂರಿನ ಹುಳಿಯಾರಿನ ಎಚ್‌.ಅಶೋಕ ಎಂಬುವರು ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯ ಕನಕವಳ್ಳಿ‌ಯಿಂದ ಪೊಲೀಸರ ಕಣ್ತಪ್ಪಿಸಿ ಬೆಳಗಾವಿಯ ನಿಪ್ಪಾಣಿಗೆ ಬಂದು, ಚೆಕ್‌ಪೋಸ್ಟ್‌ ಇದ್ದ ಕಾರಣಕ್ಕಾಗಿ ಅಲ್ಲಿಂದ ಸ್ವಲ್ಪ ದೂರ ನಡೆದುಕೊಂಡು ಬಂದು ಹುಳಿಯಾರಿನಿಂದ ಕಾರನ್ನು ತರಿಸಿಕೊಂಡು ಕೆಂಕೆರೆ ಕುದುರೆ ಕಣಿವೆಗೆ ಬಂದಿದ್ದಾರೆ. ಅಲ್ಲಿಗೆ ಕುಟುಂಬದ ಸದಸ್ಯ ಬಂದು ಕಾಡಿನ ದಾರಿಯಲ್ಲಿ ಹುಳಿಯಾರಿನ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಪಾಸ್ ಇಲ್ಲದೆ ಇದ್ದರೂ ಸ್ಥಳೀಯರೆಂದು ತೋಟಕ್ಕೆ ಹೋಗಿರುವುದಾಗಿ ಸುಳ್ಳು ಹೇಳಿ ಚೆಕ್‌ಪೋಸ್ಟ್‌ನಿಂದ ಬಂದಿದ್ದಾರೆ. ಈ ಮೂಲಕ ಕೆಂಪು ವಲಯದ ರಾಜ್ಯಗಳಿಂದ ಕರ್ನಾಟಕದ ಒಳಗೆ ಬಂದಾಗ ಪಾಲಿಸಬೇಕಾದ ನಿಯಮಗಳನ್ನು ಹಾಗೂ ಜಿಲ್ಲೆಯ ಗಡಿಗೆ ಬಂದಾಗ ಪಾಲಿಸಬೇಕಾದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಹಾಗಾಗಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಅವರು ಸಂಚರಿಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರೆತಂದ 4 ಜನರನ್ನು ತುಮಕೂರು ಸರ್ಕಾರಿ ಆಸ್ಪತ್ರೆಯ ನಿಗಾ ಘಟಕಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments