ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ?

Webdunia
ಶನಿವಾರ, 28 ಮೇ 2022 (10:33 IST)
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
 
ಇದೀಗ ಕಾಂಗ್ರೆಸ್ ನಲ್ಲಿ ದೊಡ್ಡವರಿಗೊಂದು ನ್ಯಾಯ ಚಿಕ್ಕವರಿಗೊಂದು ನ್ಯಾಯ ಎಂಬಂತಾಗಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ದೊಡ್ಡವರು ಏನು ಬೇಕಾದರೂ ಮಾತನಾಡಬಹುದು, ಸಾಮಾನ್ಯ ಕಾರ್ಯಕರ್ತರು ಮಾತನಾಡಿದರೆ, ನೋಟಿಸ್ ಗ್ಯಾರಂಟಿ ಎನ್ನುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವರ್ತಿಸುತ್ತಿದೆ ಎಂದು ಹಲವರು ಕಿಡಿಕಾರಿದ್ದಾರೆ.

ಪರಿಷತ್ ಸ್ಥಾನಕ್ಕೆ ಮಹಿಳೆಯರಿಗೆ ಅವಕಾಶ ಕೊಡದ್ದಕ್ಕೆ ಆಕ್ಷೇಪವೆತ್ತಿದ ಕವಿತಾ ರೆಡ್ಡಿಗೆ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೇ ಹಿಗ್ಗಾಮುಗ್ಗಾ ಜಾಡಿಸಿದ ರಮ್ಯಾಗೆ ನೋಟಿಸ್ ನೀಡದೇ ಫುಲ್ ಸೈಲೆಂಟ್ ಆಗಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.
ಮಾಜಿ ಸಂಸದೆ ರಮ್ಯಾ ಅಂದರೆ ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಅಷ್ಟೊಂದು ಭಯವೇ ಎಂಬ ಪ್ರಶ್ನೆಗಳು ಕಾರ್ಯಕರ್ತರ ವಲಯದಿಂದಲೇ ಎದ್ದಿದೆ. 

ಡಿಕೆಶಿ ಈ ಹಿಂದೆಯೂ ಸಾಮಾನ್ಯ ಕಾರ್ಯಕರ್ತರ ಮೇಲೆ ಕ್ರಮ ಕೈಗೊಂಡು ನಾಯಕರ ವಿಚಾರದಲ್ಲಿ ಸೈಲೆಂಟ್ ಆಗಿದ್ದರು. ಸಲೀಂ – ಉಗ್ರಪ್ಪ ಪ್ರಕರಣದಲ್ಲಿ ಸಲೀಂ ವಿರುದ್ಧ ಕ್ರಮ ಕೈಗೊಂಡು ಉಗ್ರಪ್ಪನವರನ್ನು ಹಾಗೆಯೇ ಬಿಟ್ಟಿದ್ದರು. ಮಾಜಿ ಶಾಸಕ ಅಶೋಕ್ ಪಟ್ಟಣ್ ಪ್ರಕರಣದಲ್ಲಿ ಕಾರಣ ಕೇಳಿ ನೋಟಿಸ್ ಜಾರಿಯಾದರೂ ಅಷ್ಟಕ್ಕೆ ಪ್ರಕರಣ ಕೈಬಿಟ್ಟಿದ್ದರು.

ಹೋದಲ್ಲಿ ಬಂದಲ್ಲಿ ಮುಂದಿನ ಸಿಎಂ ಬಗ್ಗೆ ಹೇಳಿಕೆ ಕೊಡುತ್ತಿರುವ ಶಾಸಕ ಜಮೀರ್ ವಿರುದ್ಧವೂ ಯಾವುದೇ ಶಿಸ್ತುಕ್ರಮವಿಲ್ಲ. ಆದರೆ ಪರಿಷತ್ ಚುನಾವಣೆ ಟಿಕೆಟ್ ಬಗ್ಗೆ ಮಾತನಾಡಿದ್ದ ಕವಿತಾ ರೆಡ್ಡಿಗೆ ಮಾತ್ರ ನೋಟಿಸ್ ಜಾರಿಗೊಳಿಸಿದ್ದಕ್ಕೆ ಕಾಂಗ್ರೆಸ್ ವಲಯದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments