Select Your Language

Notifications

webdunia
webdunia
webdunia
webdunia

ಬಾಡಿಗೆ ಕೇಳಿದರೆ ಮನೆ ಓನರ್ ಮೇಲೆ ಕೇಸ್ ಹಾಕುವೆ ಎಂದ ಜಿಲ್ಲಾಧಿಕಾರಿ

ಬಾಡಿಗೆ ಕೇಳಿದರೆ ಮನೆ ಓನರ್ ಮೇಲೆ ಕೇಸ್ ಹಾಕುವೆ ಎಂದ ಜಿಲ್ಲಾಧಿಕಾರಿ
ಉಡುಪಿ , ಬುಧವಾರ, 8 ಏಪ್ರಿಲ್ 2020 (20:07 IST)
ಮಾರ್ಚ್ ಹಾಗೂ ಏಪ್ರಿಲ್ ಬಾಡಿಗೆ ಶುಲ್ಕವನ್ನು ಕೇಳಿದರೆ ಮನೆ ಮಾಲಿಕರ ಲೈಸನ್ಸ್ ರದ್ದು ಮಾಡೋದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ -2019 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಸೆಕ್ಷನ್ 144(3) ರಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಶೆಡ್ ಹಾಗೂ ಬಾಡಿಗೆ ಮನೆಗಳಲ್ಲಿ ವಾಸವಿರುವ ಕಾರ್ಮಿಕರಿಂದ ಮಾರ್ಚ್, ಏಪ್ರಿಲ್ ತಿಂಗಳ ಬಾಡಿಗೆ ಶುಲ್ಕವನ್ನು ಮನೆ ಮಾಲೀಕರು ವಸೂಲು ಮಾಡದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

ಕಾರ್ಮಿಕರಿಂದ ಬಾಡಿಗೆ ವಸೂಲಿ ಮಾಡಿದ್ದಲ್ಲಿ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವುದಾಗಿ ತಿಳಿಸಿದ್ದಾರೆ.

ಒಂದು ವೇಳೆ ಮನೆ ಬಾಡಿಗೆ ಶುಲ್ಕಗಳನ್ನು ವಸೂಲು ಮಾಡುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ, ಶೆಡ್/ಮನೆ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ ಅವರಿಗೆ ನೀಡಲಾಗಿರುವ ಪರವಾನಿಗೆ ರದ್ದು ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ತಬ್ಲಿಘಿಗಳಲ್ಲಿ ಕೊರೊನಾ ವೈರಸ್ ಇರೋದು ಪಕ್ಕಾ