Select Your Language

Notifications

webdunia
webdunia
webdunia
webdunia

ಗಾಂಧಿ ಜಯಂತಿಗೆ ಈ ಕೆಲಸ ಮಾಡಲೇಬೇಕಂತ ಖಡಕ್ಕಾಗಿ ಹೇಳಿದ ಜಿಲ್ಲಾಧಿಕಾರಿ

ಗಾಂಧಿ ಜಯಂತಿಗೆ ಈ ಕೆಲಸ ಮಾಡಲೇಬೇಕಂತ ಖಡಕ್ಕಾಗಿ ಹೇಳಿದ ಜಿಲ್ಲಾಧಿಕಾರಿ
ಕಲಬುರಗಿ , ಮಂಗಳವಾರ, 1 ಅಕ್ಟೋಬರ್ 2019 (17:16 IST)
ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯನ್ನು ಅಕ್ಟೋಬರ್ 2 ರಂದು ಆಚರಣೆ ಮಾಡಲಾಗುತ್ತಿದೆ.

ಅಕ್ಟೋಬರ್ 2 ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಚ್ಛತೆಯ ಶ್ರಮದಾನ ಹಮ್ಮಿಕೊಳ್ಳಬೇಕು. ಹೀಗಂತ  ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್   ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ, ಶಾಲಾ-ಕಾಲೇಜು ಮುಖ್ಯಸ್ಥರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಕುರಿತು ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಕ್ಟೋಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಬಾಪೂಜಿ ಅವರ ಭಾವಚಿತ್ರಕ್ಕೆ ಪುಚ್ಪಾರ್ಚನೆ ಮಾಡುವ ಮೂಲಕ ವೇದಿಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ.

ಶಿಷ್ಠಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ವಿವಿಧ ಧರ್ಮ ಗುರುಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ಕಲಾವಿದರಿಂದ ಸದ್ಭಾವನಾ ಗೀತಗಾಯನ ಆಯೋಜಿಸುವುದು ಎಂದ್ರು.  



Share this Story:

Follow Webdunia kannada

ಮುಂದಿನ ಸುದ್ದಿ

ಪದೇ ಪದೇ ಡೆಡ್ ಲೈನ್ ನೀಡಿದ್ರೂ ಕುಂಟುತ್ತಿರೋ ಏರ್ ಪೋರ್ಟ್