Webdunia - Bharat's app for daily news and videos

Install App

ಡಾಕ್ಟರ್ ಓದಿದರು ಮೌಡ್ಯ ಬಿಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸಲಹೆ

Sampriya
ಬುಧವಾರ, 19 ಜೂನ್ 2024 (19:11 IST)
ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, "ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು" ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು.

ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ ಎಂದರು.

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments