Webdunia - Bharat's app for daily news and videos

Install App

ಬೈಕ್ ಸವಾರನ ಜತೆ ಗಲಾಟೆಗಿಳಿದು ಆತನ ಮೇಲೆ ಎರಡು ಸುತ್ತು ಗುಂಡು ಹಾರಿಸಿದ ಕಾರಿನ ಚಾಲಕ

Webdunia
ಶುಕ್ರವಾರ, 15 ಅಕ್ಟೋಬರ್ 2021 (21:47 IST)
ತನ್ನ ಆಡಿ ಕಾರಿಗೆ ಬೈಕ್ ತಾಗಿಸಿದ ಎಂದು ಬೈಕ್ ಸವಾರನ ಜತೆ ಗಲಾಟೆಗಿಳಿದು ಆತನ ಮೇಲೆ ಎರಡು ಸುತ್ತು ಗುಂಡು ಹಾರಿಸಿದ ಕಾರಿನ ಚಾಲಕನನ್ನು ಯಶವಂತಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.  
ಅಂಬ್ಯುಲೆನ್ಸ್ ಚಾಲಕ ಬೀದರ್ ಮೂಲದ ಅನೀಲ್ (27) ಪ್ರಾಣಪಾಯದಿಂದ ಪಾರಾದವರು. ಗುಂಡು ಹಾರಿಸಿದ ಆಡಿ ಕಾರಿನ ಚಾಲಕ ಮಹಾಲಕ್ಷ್ಮಿ ಲೇಔಟ್‍ನ ಹೋಟೆಲ್‍ನ ಮಾಲೀಕ ರವೀಶ್ ಗೌಡ ಬಂಧಿತ. ಆರೋಪಿಯಿಂದ ಕಾರು ಹಾಗೂ ಪಿಸ್ತೂಲ್ ಹಾಗೂ ಗನ್ ಪರವಾನಗಿ ಪತ್ರ ವಶಕ್ಕೆ ಪಡೆಯಲಾಗಿದೆ ಎಂದು ಪೆÇಲೀಸರು ತಿಳಿಸಿದರು.  
ಯಶವಂತಪುರ ಠಾಣಾ ವ್ಯಾಪ್ತಿಯ ಎಂ.ಎಸ್.ರಾಮಯ್ಯ ಆಸ್ಪತ್ರೆ ಹಿಂಬದಿಯ ರಸ್ತೆಯಲ್ಲಿ ತನ್ನ ಐಷಾರಾಮಿ ಆಡಿ ಕಾರಿಗೆ ಬೈಕ್ ತಾಗಿಸಿದ್ದಾನೆ ಎಂದು ಕೋಪಗೊಂಡ ಕಾರು ಚಾಲಕ ರವೀಶ್ ಗೌಡ, ಬೈಕ್ ಸವಾರ ಅನಿಲ್? ಜತೆ ಜಗಳಕ್ಕಿಳಿದಿದ್ದಾರೆ.  ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಾಗ ರವೀಶ್‍ಗೌಡ ತಮ್ಮ ಕಾರಿನಲ್ಲಿದ್ದ ಪಿಸ್ತೂಲ್ ತೆಗೆದು ಎರಡು ಬಾರಿ ಅನಿಲ್ ಮೇಲೆ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್ ಅನಿಲ್ ಗುಂಡಿನಿಂದ ತಪ್ಪಿಸಿಕೊಂಡು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಳಿಕ ಅನಿಲ್ ಕಾರು ಚಾಲಕನ ವಿರುದ್ಧ ಯಶವಂತಪುರ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. 
ಪ್ರಕರಣ ದಾಖಲಿಸಿಕೊಂಡ ಪೆÇಲೀಸರು ಎಂ.ಎಸ್. ರಾಮಯ್ಯ ಆಸ್ಪತ್ರೆ ಬಳಿ ಇರುವ ಹಾಗೂ ರಸ್ತೆಯಲ್ಲಿರುವ ಹಲವು ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದಾರೆ. ಕಾರಿನ ನಂಬರ್ ಹಾಗೂ ಚಾಲಕ ಮುಖಚಹರೆ ಪತ್ತೆಯಾಗಿದೆ. ಕಾರಿನ ವಿಳಾಸ ಬೆನ್ನತ್ತಿ ಹೋದಾಗ ಆರೋಪಿ ಮಹಾಲಕ್ಷ್ಮಿ ಲೇಔಟ್‍ನಲ್ಲಿ ಹೋಟೆಲ್ ಮಾಲೀಕ ರವೀಶ್ ಗೌಡ ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ಬಂಧಿಸಿ 307, 323, ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಿಸಿಲಾಗಿದೆ ಎಂದು ಪೆÇಲೀಸರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments