Webdunia - Bharat's app for daily news and videos

Install App

ಬಿಎಂಟಿಸಿ ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ

Sampriya
ಬುಧವಾರ, 6 ನವೆಂಬರ್ 2024 (16:30 IST)
ಬೆಂಗಳೂರು: ಬಿಎಂಟಿಸಿ ಬಸ್​ ಚಲಾಯಿಸುತ್ತಿದ್ದ ವೇಳೆಯೇ  ಹೃದಯಾಘಾತವಾಗಿ ಚಾಲಕ ಮೃತಪಟ್ಟಿರುವ ಘಟನೆ ನೆಲಮಂಗಲ ಟೌನ್ ಬಿನ್ನಮಂಗಲ ಬಸ್ ನಿಲ್ದಾಣ ಬಳಿ ನಡೆದಿದೆ.

ಮೃತರನ್ನು ಹಾಸನ ಮೂಲದ ಚಾಲಕ ಕಿರಣ್‌ಕುಮಾರ್ (40) ಎಂದು ಗುರುತಿಸಲಾಗಿದೆ. ಇಂದು ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್‌ಅನ್ನು ಚಾಲನೆ ಮಾಡುತ್ತಿರುವಾಗಲೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಕಿರಣ್‌ಕುಮಾರ್ ಬಸ್​ ರಸ್ತೆ ಬದಿಗೆ ಹಾಕಿ ಅಲ್ಲೇ ಪ್ರಾಣಬಿಟ್ಟಿದ್ದಾನೆ.

ಹಾಸನ ಮೂಲದ ಚಾಲಕ ಕಿರಣ್‌ಕುಮಾರ್, ಡಿಪೋ 40ರಲ್ಲಿ ಕಳೆದ 6 ವರ್ಷದಿಂದ ಡೈವರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ, ದುರದೃಷ್ಟವಶಾತ್ ಇಂದು ಬಸ್ ಚಾಲನೆ ಮಾಡುವಾಗಲೇ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಕೂಡಲೇ ನಿರ್ವಾಹಕ ಒಬಳೇಶ್‌ ಸಹಾಯದಿಂದ ಚಾಲಕನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ಅಷ್ಟರಾಗಲೇ ಕಿರಣ್‌ಕುಮಾರ್ ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದರು. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments