ಬಿಎಂಟಿಸಿ ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ

Sampriya
ಬುಧವಾರ, 6 ನವೆಂಬರ್ 2024 (16:30 IST)
ಬೆಂಗಳೂರು: ಬಿಎಂಟಿಸಿ ಬಸ್​ ಚಲಾಯಿಸುತ್ತಿದ್ದ ವೇಳೆಯೇ  ಹೃದಯಾಘಾತವಾಗಿ ಚಾಲಕ ಮೃತಪಟ್ಟಿರುವ ಘಟನೆ ನೆಲಮಂಗಲ ಟೌನ್ ಬಿನ್ನಮಂಗಲ ಬಸ್ ನಿಲ್ದಾಣ ಬಳಿ ನಡೆದಿದೆ.

ಮೃತರನ್ನು ಹಾಸನ ಮೂಲದ ಚಾಲಕ ಕಿರಣ್‌ಕುಮಾರ್ (40) ಎಂದು ಗುರುತಿಸಲಾಗಿದೆ. ಇಂದು ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್‌ಅನ್ನು ಚಾಲನೆ ಮಾಡುತ್ತಿರುವಾಗಲೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಕಿರಣ್‌ಕುಮಾರ್ ಬಸ್​ ರಸ್ತೆ ಬದಿಗೆ ಹಾಕಿ ಅಲ್ಲೇ ಪ್ರಾಣಬಿಟ್ಟಿದ್ದಾನೆ.

ಹಾಸನ ಮೂಲದ ಚಾಲಕ ಕಿರಣ್‌ಕುಮಾರ್, ಡಿಪೋ 40ರಲ್ಲಿ ಕಳೆದ 6 ವರ್ಷದಿಂದ ಡೈವರ್ ಆಗಿ ಕೆಲಸ ಮಾಡುತ್ತಿದ್ದರು. ಆದ್ರೆ, ದುರದೃಷ್ಟವಶಾತ್ ಇಂದು ಬಸ್ ಚಾಲನೆ ಮಾಡುವಾಗಲೇ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಕೂಡಲೇ ನಿರ್ವಾಹಕ ಒಬಳೇಶ್‌ ಸಹಾಯದಿಂದ ಚಾಲಕನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ಅಷ್ಟರಾಗಲೇ ಕಿರಣ್‌ಕುಮಾರ್ ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದರು. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments