Webdunia - Bharat's app for daily news and videos

Install App

ಪಠ್ಯಪುಸ್ತಕ ಮಾಹಿತಿ ಇಲ್ಲದೆ ಇಕ್ಕಟ್ಟಿಗೆ ಸಿಲುಕಿದ ಶಿಕ್ಷಣ ಇಲಾಖೆ

Webdunia
ಶನಿವಾರ, 4 ಜೂನ್ 2022 (20:49 IST)
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಪಠ್ಯ ಪುಸ್ತಕಗಳು ಸರಬರಾಜಾಗುತ್ತಿದ್ದು, ಈಗಾಗಲೇ ಪಠ್ಯಪುಸ್ತಕ ತಲುಪಿರುವ ಶಾಲೆಗಳಿಗೆ ಪ್ರಸಕ್ತ ಸಾಲಿಗೆ ಪರಿಷ್ಕರಣೆಯಾಗಿರುವ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಗಳು ಬಂದಿಲ್ಲ. ಬದಲಿಗೆ ಕಳೆದ ಸಾಲಿನ ಪಠ್ಯಗಳನ್ನೊಳಗೊಂಡ ಪಠ್ಯಗಳೇ ಸರಬರಾಜಾಗಿವೆ. ಇದರಿಂದ ಶಿಕ್ಷಕರು ಈಗ ಬಂದಿರುವ ಹಳೆಯ ಪಠ್ಯಕ್ರಮವನ್ನೇ ಬೋಧಿಸಬೇಕಾ, ಇಲ್ಲ ಹೊಸ ಪಠ್ಯಕ್ಕೆ ಕಾಯಬೇಕಾ? ಯಾವ್ಯಾವ ಪಠ್ಯ ಪರಿಷ್ಕರಣೆಯಾಗಿದೆ, ಅದನ್ನು ಬಿಟ್ಟು ಉಳಿದದ್ದು ಬೋಧಿಸಬೇಕಾ ಎಂಬುದು ತಿಳಿಯದೆ ಗೊಂದಲಕ್ಕೀಡಾಗಿದ್ದಾರೆ. ಇತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳೂ ಕೂಡ ಶಿಕ್ಷಕರ ಪ್ರಶ್ನೆಗಳಿಗೆ ಉತ್ತರಿಸಲಾಗದ ಸ್ಥಿತಿ ತಲುಪಿದ್ದಾರೆ. ಹಳೆಯ ಪಠ್ಯಕ್ರಮವನ್ನೇ ಬೋಧಿಸಲು ಹೇಳುವುದಾ? ಹೊಸ ಪಠ್ಯ ಬಂದ ಬಳಿಕ ಹಳೆ ಪಠ್ಯ ವಾಪಸ್ ಪಡೆಯಲಾಗುತ್ತಾ? ಇಲ್ಲಾ ಹಳೆಯ ಪಠ್ಯದ ಜೊತೆಗೆ ಪರಿಷ್ಕರಣೆಯಾಗಿರುವ ಪಾಠಗಳ ಪ್ರತಿಗಳು ಮಾತ್ರ ಪ್ರತ್ಯೇಕವಾಗಿ ಬರುತ್ತವಾ ಇಲ್ಲಮಾಹಿತಿಯೂ ಇಲ್ಲದೆ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments