Webdunia - Bharat's app for daily news and videos

Install App

ಯುವತಿಯ ವಿಚಾರಕ್ಕೆ ಶುರುವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ

Webdunia
ಶನಿವಾರ, 9 ಅಕ್ಟೋಬರ್ 2021 (20:48 IST)
ಬೆಂಗಳೂರು: ಯುವತಿಯ ವಿಚಾರಕ್ಕೆ ಶುರುವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂವರು ಆರೋಪಿಗಳಾದ ನಯೀಮ್​​, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್​​​ಎಎಲ್​ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ಲಿಖಿತ್​​ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಲಿಖಿತ್ ಈ ಮೊದಲು ಸಿದ್ದಿಕ್ ಎಂಬಾತನ ಬಳಿ ಸಾಲ ಪಡೆದಿದ್ದ. ಹಣ ವಾಪಸ್​ ಕೇಳಿದಾಗ ಕೊಡದೆ ಅವಾಚ್ಯ ಪದಗಳಿಂದ ನಿಂದಿಸಿದ್ದ. ಅಲ್ಲದೆ ಈ ಕುರಿತು ಮಾತನಾಡಲು ಆರೋಪಿಗಳಿಗೆ ಲಿಖಿತ್​ ಕರೆ ಮಾಡಿದ್ದ. ಇದಕ್ಕೆ ಆರೋಪಿಗಳು ಕೂಡ ಒಪ್ಪಿದ್ದರು. ಮಾತುಕತೆಗೆ ಬರುವಾಗ ಲಿಖಿತ್​​ ಜತೆ ನವೀನ್ ಮತ್ತು ಕದಿರೇಶ್ ಎಂಬುವರು ಬಂದಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ ಲಿಖಿತ್​​ನನ್ನು ಡ್ರ್ಯಾಗರ್​​ನಿಂದ ಇರಿದು ಆರೋಪಿಗಳು ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.
ಘಟನೆ ಹಿನ್ನೆಲೆ: ನಯೀಮ್​​ ಮತ್ತು ಲಿಖಿತ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಯುವತಿ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಶುಕ್ರವಾರ ಸಂಜೆ 4 ಗಂಟೆಗೆ ಈ ವಿಚಾರದ ಕುರಿತು ಮಾತನಾಡಲು ನಯೀಮ್​ ನನ್ನು ಹೆಚ್‌ಎಎಲ್​​ನ ಲಾಲ್ ಬಹದ್ದೂರ್ ಶಾಸ್ತ್ರಿ ನಗರಕ್ಕೆ ಬರಲು ಲಿಖಿತ್ ಹೇಳಿದ್ದ. ಈ ವೇಳೆ ಯುವತಿ ವಿಚಾರವಾಗಿ ಇಬ್ಬರೂ ಮಾತುಕತೆ ಪ್ರಾರಂಭಿಸಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು. ಬಳಿಕ ಡ್ರ್ಯಾಗರ್​ನಿಂದ ಲಿಖಿತ್​​​ಗೆ ಇರಿದು ಇಬ್ಬರು ಪರಾರಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments