Webdunia - Bharat's app for daily news and videos

Install App

ಪರಾರಿಯಾಗಿದ್ದ ಅರ್ಜುನ ಪತ್ತೆ: ನಿಟ್ಟುಸಿರು ಬಿಟ್ಟ ಅರಣ್ಯ ಸಿಬ್ಬಂದಿ!

Webdunia
ಗುರುವಾರ, 15 ನವೆಂಬರ್ 2018 (14:23 IST)
ವಿಶ್ವವಿಖ್ಯಾತ ಮೈಸೂರು ದಸರಾ ಮುಗಿದ ಮೇಲೆ ಕ್ಯಾಪ್ಟನ್ ಅರ್ಜುನ್ ಶಿಬಿರದಿಂದ ಪರಾರಿಯಾಗಿದ್ದ. ಆದರೆ ಅರ್ಜುನನ್ನು ಮರಳಿ ಶಿಬಿರಕ್ಕೆ ತರುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬಳ್ಳೆ ಶಿಬಿರದಿಂದ ತಪ್ಪಿಸಿಕೊಂಡಿದ್ದ ಕ್ಯಾಪ್ಟನ್ ಅರ್ಜುನ ಕೊನೆಗೂ ಸಿಕ್ಕಿದ್ದಾನೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಬಳ್ಳೆ ಶಿಬಿರದಿಂದ ಬುಧವಾರ ಮಧ್ಯರಾತ್ರಿ ವೇಳೆ ಕಾಲಿಗೆ ಕಟ್ಟಿದ್ದ ಸರಪಳಿಯನ್ನು ಕಿತ್ತುಕೊಂಡು ಅಲ್ಲಿಂದ ತಪ್ಪಿಸಿಕೊಂಡಿದ್ದ ಅರ್ಜುನ, ಗುರುವಾರ ಬೆಳಿಗ್ಗೆಯಾದರೂ ಶಿಬಿರಕ್ಕೆ ವಾಪಸ್ ಬಂದಿರಲಿಲ್ಲ.

ಇದರಿಂದ ಅಲ್ಲಿನ ಸುತ್ತಮುತ್ತಲ ಕಾಡಿನ ಪ್ರದೇಶದಲ್ಲಿ ಹುಡುಕಾಡಿದ ಸಿಬ್ಬಂದಿಗಳು ಗಾಬರಿಗೊಂಡು ಮುಖ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು.

ಬಳ್ಳೆ ಶಿಬಿರದಿಂದ 16 ಕಿ.ಮೀ. ದೂರದಲ್ಲಿರುವ ಅಂತರಸಂತೆ ಅರಣ್ಯ ಪ್ರದೇಶದಲ್ಲಿ ಸಂಜೆ 4 ಸಮಯದಲ್ಲಿ ಕತ್ತಿಗೆ ಗಂಟೆ ಹಾಗೂ ಕಾಲಿಗೆ ಸರಪಳಿ ಕಟ್ಟಿರುವ ಆನೆಯನ್ನು ನೋಡಿದ ಗ್ರಾಮಸ್ಥರು ಸಾಕಾನೆ ಇರಬಹುದು ಎಂದು ಭಾವಿಸಿ ಕೂಡಲೇ ವಾಚರ್ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಮಾವುತನ ಮೂಲಕ ಅರ್ಜುನನನ್ನು ಪತ್ತೆ ಹಚ್ಚಿ ಮತ್ತೆ ಬಳ್ಳೆ ಕ್ಯಾಂಪ್ಗೆ ಕರೆತಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments