Webdunia - Bharat's app for daily news and videos

Install App

ಪಾಕಿಸ್ತಾನ ಪರ ಘೋಷಣೆಯ ಕೋಲಾಹಲಕ್ಕೆ ಸಾಕ್ಷಿಯಾಯ್ತು ಕಲಾಪ

geetha
ಬುಧವಾರ, 28 ಫೆಬ್ರವರಿ 2024 (19:23 IST)
ಬೆಂಗಳೂರು : ಸದನ ಪ್ರಾರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಆರ್‌.ಅಶೋಕ್‌ ಎದ್ದು ನಿಂತು ಪಾಕಿಸ್ತಾನ ಪರ ಘೋಷಣೆಯ ವಿಷಯವನ್ನು ಪ್ರಸ್ತಾಪಿಸಿದರು.  ಕರ್ನಾಟಕದ ಶಕ್ತಿ ಕೇಂದ್ರ ಎಂದೇ ಬಿಂಬಿತವಾಗಿರುವ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ. ಕಾಂಗ್ರೆಸ್‌ ಸರ್ಕಾರ ಇದುವರೆಗೂ ಆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ಗಡಿಯಲ್ಲಿ ಕಾಯುತ್ತಿರುವ ಯೋಧರಿಗೆ ಮುಖ ತೋರಿಸುವುದಾದರೂ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಬುಧವಾರ ನಡೆದ ಬಜೆಟ್‌ ನಿರ್ಣಯದ ಅಧಿವೇಶನ ಕಲಾಪ ಪಾಕಿಸ್ತಾನ ಪರ ಘೋಷಣೆಯ ಕೋಲಾಹಲಕ್ಕೆ ಸಾಕ್ಷಿಯಾಯ್ತು. ಮಂಗಳವಾರ ರಾಜ್ಯಸಭಾ ಸದಸ್ಯ ನಾಸಿರ್‌ ಹುಸೇನ್‌ ವಿಜಯೋತ್ಸವದ ವೇಳೆ ಅಭಿಮಾನಿಯೊಬ್ಬ ಪಾಕ್‌ ಪರ ಘೋಷಣೆ ಕೂಗಿದ್ದಾನೆಲ್ಲಾಗಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಆಗ್ರಹಿಸಿದೆ.

ಆರೋಪಿಯನ್ನು ಕಾಂಗ್ರೆಸಿಗರೇ ರಕ್ಷಿಸಿ ಸುರಕ್ಷಿತವಾಗಿ ಆತನನ್ನು ಹೊರಗೆ ಕಳಿಸಿದ್ದಾರೆ. ನಾಸಿರ್‌ ಹುಸೇನ್‌ ಅವರು ಈ ಬಗ್ಗೆ ಪ್ರಶ್ನಿಸಿದ ಪತ್ರಕರ್ತರಿಗೆ ಅವಾಚ್ಯ ಶಬ್ದಗಳಿಂದ ಏಕವಚನದಲ್ಲಿ ನಿಂದಿಸಿದ್ದಾರೆ. ಕೂಡಲೇ ನಾಸಿರ್‌ ಹುಸೇನ್‌ ಅವರ ಸದಸ್ಯತ್ವವನ್ನು ರದ್ದು ಪಡಿಸಬೇಕೆಂದು ಆರ್‌. ಅಶೋಕ್‌ ಆಗ್ರಹಿಸಿದರು. 
 
ಇದಕ್ಕೆ ತಿರುಗೇಟು ನೀಡಿದ ದಿನೇಶ್‌ ಗುಂಡೂರಾವ್‌, ಈ ಕೃತ್ಯದ ಹಿಂದೆ ನಿಮ್ಮವರದೇ ಕೈವಾಡ ಇರಬಹುದು. ಈ ಹಿಂದೆ ಪಾಕ್‌ ಧ್ವಜ ಹಾರಿಸಿ ವಿವಾದ , ಗಲಭೆ ಎಬ್ಬಿಸಲು ಪ್ರಯತ್ನಿಸಿದ್ದಿರಿ ಎಂದು ಆರೋಪಿಸಿದರು. ಸಚಿವ ಜಮೀರ್‌ ಅಹ್ಮದ್‌ ಸಹ ಪ್ರತಿಕ್ರಿಯಿಸಿ, ಸಂಸದ್‌ ಭವನದಲ್ಲಿ ಬಾಂಬ್‌ ಇಡಲು ಯತ್ನಿಸಿದ ಆರೋಪಿಗೆ ಪಾಸ್‌ ನೀಡಿದ್ದವರು ನೀವು ಎಂದು ತಿರುಗೇಟು ನೀಡಿದರು. 
ಸದನದಲ್ಲಿ ಕೋಲಾಹಲದ ಸನ್ನಿವೇಶ ಸೃಷ್ಟಿಯಾದ ಕಾರಣ ಕಲಾಪವನ್ನು ಮುಂದೂಡಲಾಯಿತು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments