Webdunia - Bharat's app for daily news and videos

Install App

ವಿವಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ್ದ ಸ್ಫೋಟ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (22:24 IST)
ಬೆಂಗಳೂರು: ವಿವಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣ ಸಂಬಂಧ ಎಚ್ಚೆತ್ತಿರುವ ಪೊಲೀಸರು, ಜ‌ನನಿಬಿಡ ಪ್ರದೇಶವಾದ ತರಗುಪೇಟೆ ಸೇರಿ ಸುತ್ತಮುತ್ತಲಿನಲ್ಲಿರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.
ಗೋದಾಮಿಗೆ ಮಾಲೀಕರು ಪರವಾನಿಗೆ ಪಡೆದುಕೊಂಡಿದ್ದಾರಾ? ದಾಸ್ತಾನಿನಲ್ಲಿ ಅಕ್ರಮವಾಗಿ ಏನಾದರೂ ಸ್ಫೋಟಕ ಇಡಲಾಗಿದೆಯಾ ಎಂಬುದರ ಬಗ್ಗೆ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಬಾಲಾಜಿ ಕಾಫಿ ಟ್ರೇಡಿಂಗ್ ಕಂಪನಿ ಮೇಲೆ ದಾಳಿಸಿದಾಗ ಮೇಲ್ನೋಟಕ್ಕೆ ಅಕ್ರಮವಾಗಿ ಇರಿಸಲಾಗಿದ್ದ 40 ಕೆಜಿ ತೂಕದ 16 ಗ್ಯಾಸ್ ಸಿಲಿಂಡರ್​​ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಪಟಾಕಿಯಿಂದಲೇ ಸ್ಫೋಟ ಸಂಭವಿಸಿದೆ ಎಂದು‌ ಅಧಿಕಾರಿಗಳು ಪರಿಶೀಲನೆ ವೇಳೆ‌ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಸದ್ಯ ಈ ಸಂಬಂಧ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ನಿಜಕ್ಕೂ ಪಟಾಕಿ ಸಿಡಿತದಿಂದ ಈ ಪರಿ ಪರಿಣಾಮವಾಗುತ್ತಾ ಎಂಬುದರ ಬಗ್ಗೆ ತಜ್ಞರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಗೋದಾಮಿನಲ್ಲಿ ಪಟಾಕಿ ಜತೆ ಬೇರೆ ರಾಸಾಯನಿಕ ವಸ್ತುಗಳನ್ನು ಇಟ್ಟಿರಬಹುದು. ಪಟಾಕಿಯಿಂದ ಈ ಪರಿ ಅವಘಡ ಸಂಭವಿಸುವುದಿಲ್ಲ ಎಂದು ತಜ್ಞರು ಅಂದಾಜಿಸಿದ್ದಾರೆ. ಈ‌ ಬಗ್ಗೆ ನಿಖರ ಕಾರಣ ತಿಳಿಯಲು ಎಫ್​​ಎಸ್​​​ಎಲ್ ವರದಿ ಬಂದ ನಂತರವಷ್ಟೇ ಗೊತ್ತಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments