ವಿವಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ್ದ ಸ್ಫೋಟ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (22:24 IST)
ಬೆಂಗಳೂರು: ವಿವಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣ ಸಂಬಂಧ ಎಚ್ಚೆತ್ತಿರುವ ಪೊಲೀಸರು, ಜ‌ನನಿಬಿಡ ಪ್ರದೇಶವಾದ ತರಗುಪೇಟೆ ಸೇರಿ ಸುತ್ತಮುತ್ತಲಿನಲ್ಲಿರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.
 
ಗೋದಾಮಿಗೆ ಮಾಲೀಕರು ಪರವಾನಿಗೆ ಪಡೆದುಕೊಂಡಿದ್ದಾರಾ? ದಾಸ್ತಾನಿನಲ್ಲಿ ಅಕ್ರಮವಾಗಿ ಏನಾದರೂ ಸ್ಫೋಟಕ ಇಡಲಾಗಿದೆಯಾ ಎಂಬುದರ ಬಗ್ಗೆ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಬಾಲಾಜಿ ಕಾಫಿ ಟ್ರೇಡಿಂಗ್ ಕಂಪನಿ ಮೇಲೆ ದಾಳಿಸಿದಾಗ ಮೇಲ್ನೋಟಕ್ಕೆ ಅಕ್ರಮವಾಗಿ ಇರಿಸಲಾಗಿದ್ದ 40 ಕೆಜಿ ತೂಕದ 16 ಗ್ಯಾಸ್ ಸಿಲಿಂಡರ್​​ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
 
ಪಟಾಕಿಯಿಂದಲೇ ಸ್ಫೋಟ ಸಂಭವಿಸಿದೆ ಎಂದು‌ ಅಧಿಕಾರಿಗಳು ಪರಿಶೀಲನೆ ವೇಳೆ‌ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಸದ್ಯ ಈ ಸಂಬಂಧ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ನಿಜಕ್ಕೂ ಪಟಾಕಿ ಸಿಡಿತದಿಂದ ಈ ಪರಿ ಪರಿಣಾಮವಾಗುತ್ತಾ ಎಂಬುದರ ಬಗ್ಗೆ ತಜ್ಞರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಗೋದಾಮಿನಲ್ಲಿ ಪಟಾಕಿ ಜತೆ ಬೇರೆ ರಾಸಾಯನಿಕ ವಸ್ತುಗಳನ್ನು ಇಟ್ಟಿರಬಹುದು. ಪಟಾಕಿಯಿಂದ ಈ ಪರಿ ಅವಘಡ ಸಂಭವಿಸುವುದಿಲ್ಲ ಎಂದು ತಜ್ಞರು ಅಂದಾಜಿಸಿದ್ದಾರೆ. ಈ‌ ಬಗ್ಗೆ ನಿಖರ ಕಾರಣ ತಿಳಿಯಲು ಎಫ್​​ಎಸ್​​​ಎಲ್ ವರದಿ ಬಂದ ನಂತರವಷ್ಟೇ ಗೊತ್ತಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments