Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

Webdunia
ಶುಕ್ರವಾರ, 22 ಮಾರ್ಚ್ 2019 (11:45 IST)
ಬಿಜೆಪಿ ಲೋಕಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿರುವಂತೆ ಪಕ್ಷದಲ್ಲೇ ಭಿನ್ನಮತ ಭುಗಿಲೆದ್ದಿದೆ.
ಕಲಬುರ್ಗಿ ಲೋಕಸಭೆ ಬಿಜೆಪಿ ಟಿಕೆಟ್ ಉಮೇಶ ಜಾಧವ್ ಪಾಲಾದ ಹಿನ್ನೆಲೆಯಲ್ಲಿ ಕಮಲ ಪಾಳೆಯದಲ್ಲಿ ಅಸಮಧಾನ ಹೊರಬಂದಿದೆ.

ಜಾಧವ ಅವರ ರಾಜೀನಾಮೆ ಅಂಗೀಕಾರಕ್ಕೂ ಮುನ್ನವೇ ಟಿಕೇಟ್ ಘೋಷಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮ್ಮ ಪಕ್ಷಕ್ಕೆ ಇಂತಹ ದುಸ್ಥಿತಿ ಬರಬಾರದಿತ್ತು. ಈಗಲೂ ಜಾಧವ್ ಕಾಂಗ್ರೆಸ್ ಶಾಸಕರಾಗಿದ್ದಾರೆ. ಹೀಗಿರಬೇಕಾದರೆ ಅವರಿಗೆ ಬಿಜೆಪಿ ಟಿಕೆಟ್ ಹೇಗೆ ಘೋಷಣೆ ಮಾಡಿತೋ ಗೊತ್ತಿಲ್ಲ.

ಒಂದು ವೇಳೆ ಅವರ ಶಾಸಕತ್ವ ಅನರ್ಹಗೊಂಡರೆ ಬಿಜೆಪಿಗೆ ದೊಡ್ಡ ಮುಖಭಂಗವಾಗುತ್ತದೆ. ಇಂತಹ ವಿಚಾರಗಳನ್ನು ಬಿಜೆಪಿ ನಾಯಕರು ಗಣನೆಗೆ ತೆಗೆದುಕೊಳ್ಳದಿರೋದು ದುರ್ದೈವದ ಸಂಗತಿ. ಉಮೇಶ ಜಾಧವ್ ಗೆ ರತ್ನಗಂಬಳಿ ಹಾಕಿ ಕರೆಯುವ ಅವಶ್ಯಕತೆ ಇರಲಿಲ್ಲ. ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ನೀಡೋದು ಬಿಟ್ಟು ಪಕ್ಷಾಂತರಿಗಳಿಗೆ ಮಣೆ ಹಾಕಲಾಗಿದೆ. ಹೀಗಂತ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ್ ಚವ್ಹಾಣ ಕಿಡಿಕಾರಿದ್ದಾರೆ.

ಮುಂದಿನ ದಿನಗಳಲ್ಲಿ ಇದಕ್ಕಾಗಿ ಪಕ್ಷ ದೊಡ್ಡ ದಂಡ ತೆರಬೇಕಾಗುತ್ತದೆ ಅಂತಾನೂ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಚವ್ಹಾಣ ಎಚ್ಚರಿಕೆ ನೀಡಿದ್ದಾರೆ.

ಜಾಧವ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಬಿಸಿಲೂರಿನ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗತೊಡಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments