ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

Webdunia
ಶುಕ್ರವಾರ, 22 ಮಾರ್ಚ್ 2019 (11:45 IST)
ಬಿಜೆಪಿ ಲೋಕಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿರುವಂತೆ ಪಕ್ಷದಲ್ಲೇ ಭಿನ್ನಮತ ಭುಗಿಲೆದ್ದಿದೆ.
ಕಲಬುರ್ಗಿ ಲೋಕಸಭೆ ಬಿಜೆಪಿ ಟಿಕೆಟ್ ಉಮೇಶ ಜಾಧವ್ ಪಾಲಾದ ಹಿನ್ನೆಲೆಯಲ್ಲಿ ಕಮಲ ಪಾಳೆಯದಲ್ಲಿ ಅಸಮಧಾನ ಹೊರಬಂದಿದೆ.

ಜಾಧವ ಅವರ ರಾಜೀನಾಮೆ ಅಂಗೀಕಾರಕ್ಕೂ ಮುನ್ನವೇ ಟಿಕೇಟ್ ಘೋಷಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಮ್ಮ ಪಕ್ಷಕ್ಕೆ ಇಂತಹ ದುಸ್ಥಿತಿ ಬರಬಾರದಿತ್ತು. ಈಗಲೂ ಜಾಧವ್ ಕಾಂಗ್ರೆಸ್ ಶಾಸಕರಾಗಿದ್ದಾರೆ. ಹೀಗಿರಬೇಕಾದರೆ ಅವರಿಗೆ ಬಿಜೆಪಿ ಟಿಕೆಟ್ ಹೇಗೆ ಘೋಷಣೆ ಮಾಡಿತೋ ಗೊತ್ತಿಲ್ಲ.

ಒಂದು ವೇಳೆ ಅವರ ಶಾಸಕತ್ವ ಅನರ್ಹಗೊಂಡರೆ ಬಿಜೆಪಿಗೆ ದೊಡ್ಡ ಮುಖಭಂಗವಾಗುತ್ತದೆ. ಇಂತಹ ವಿಚಾರಗಳನ್ನು ಬಿಜೆಪಿ ನಾಯಕರು ಗಣನೆಗೆ ತೆಗೆದುಕೊಳ್ಳದಿರೋದು ದುರ್ದೈವದ ಸಂಗತಿ. ಉಮೇಶ ಜಾಧವ್ ಗೆ ರತ್ನಗಂಬಳಿ ಹಾಕಿ ಕರೆಯುವ ಅವಶ್ಯಕತೆ ಇರಲಿಲ್ಲ. ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ನೀಡೋದು ಬಿಟ್ಟು ಪಕ್ಷಾಂತರಿಗಳಿಗೆ ಮಣೆ ಹಾಕಲಾಗಿದೆ. ಹೀಗಂತ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ್ ಚವ್ಹಾಣ ಕಿಡಿಕಾರಿದ್ದಾರೆ.

ಮುಂದಿನ ದಿನಗಳಲ್ಲಿ ಇದಕ್ಕಾಗಿ ಪಕ್ಷ ದೊಡ್ಡ ದಂಡ ತೆರಬೇಕಾಗುತ್ತದೆ ಅಂತಾನೂ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಚವ್ಹಾಣ ಎಚ್ಚರಿಕೆ ನೀಡಿದ್ದಾರೆ.

ಜಾಧವ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಬಿಸಿಲೂರಿನ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗತೊಡಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments