Webdunia - Bharat's app for daily news and videos

Install App

ನನ್ನ ಸಾಲ ಮನ್ನಾ ಮಾಡಬೇಡಿ ಎಂದು ಸರಕಾರಕ್ಕೆ ಪತ್ರ ಬರೆದ ರೈತ

Webdunia
ಸೋಮವಾರ, 13 ಆಗಸ್ಟ್ 2018 (17:48 IST)
ಸಾಲಮನ್ನಾ ಮಾಡಿದ್ರೆ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆ. ಹಾಗಾಗಿ ನನ್ನ ಸಾಲ ಮನ್ನಾ ಮಾಡೋದು ಬೇಡ ಎಂದು ರೈತನೊಬ್ಬ ಸರಕಾರಕ್ಕೆ ಪತ್ರ ಬರೆದಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ರೈತನೊಬ್ಬ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಮತ್ತು ಜಿಲ್ಲಾಡಳಿತಕ್ಕೆ ಪತ್ರದ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಿದ್ದು, ನನ್ನ ಸಾಲ ಮನ್ನಾ ಮಾಡಬಾರದು ಎಂದು ಕೋರಿದ್ದಾರೆ. ಮೂಡಿಗೆರೆ ತಾಲೂಕಿನ ಕರಗೋಡು ಗ್ರಾಮದ ಅಮರನಾಥ ಸರ್ಕಾರಕ್ಕೆ ಪತ್ರ ಬರೆದ ರೈತ.  ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇತ್ತೀಚಿಗೆ ರೈತರ ಎರಡು ಲಕ್ಷದ ವರೆಗಿನ ಸಾಲ ಮನ್ನಾ ಮಾಡೋದಾಗಿ ಘೋಷಣೆ ಮಾಡಿದ್ರು. ಸಾಲ ಮನ್ನಾ ಘೋಷಣೆ ಹಿನ್ನೆಲೆ ನನ್ನ ಆತ್ಮಸಾಕ್ಷಿಗೆ ನಿಮ್ಮ ಸಾಲ ಮನ್ನಾ ಒಪ್ಪುವುದಿಲ್ಲ. ಹಾಗಾಗಿ ನನಗೆ ಸಾಲ ಮನ್ನಾ ಮಾಡೋದು ಬೇಡ ಎಂದು ಅಮರನಾಥ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ನನಗೆ ಕರಗೋಡು ಗ್ರಾಮದ ಸರ್ವೇ ನಂಬರ್ 8 ರಲ್ಲಿ 11 ಎಕರೆ ಜಮೀನು ಹೊಂದಿದ್ದು, ನಾನು 2016 ರಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ  ನಾಲ್ಕು ಲಕ್ಷ ಸಾಲ ಮಾಡಿದ್ದೇನೆ.  ಆದರೂ ನನ್ನ ಸಾಲ ಮನ್ನಾ ಮಾಡೋದು ಬೇಡ, ಬೇರೆಯ ರೈತರಿಗೆ ಸಾಲ ಮನ್ನಾ ಮಾಡಿರೋದಕ್ಕೆ ನನ್ನ ಅಭ್ಯಂತರವಿಲ್ಲ. ಆದ್ರೆ, ರೈತರ ಬೆಳೆದ ಬೆಳೆಗೆ ವೈಜ್ಞನಿಕ ಬೆಲೆ ನೀಡಿ ರೈತರಿಗೆ ಬೆಂಬಲ ನೀಡಬೇಕು ಎಂದು ಸರ್ಕಾರಕ್ಕೆ ರೈತ ಆಗ್ರಹ ಮಾಡಿದ್ದಾರೆ. ಇನ್ನು ಸಾಲ ಮನ್ನಾ ಬೇಡಾ ಎಂದ ರಾಜ್ಯದ ಮೊದಲ ರೈತರಾಗಿದ್ದಾರೆ ಅಮರನಾಥ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments