Webdunia - Bharat's app for daily news and videos

Install App

ಕುಡುಕ ಮಗನಿಗೆ ಗುಂಡು ಹಾರಿಸಿದ ತಂದೆ

Webdunia
ಬುಧವಾರ, 17 ಅಕ್ಟೋಬರ್ 2018 (18:45 IST)
ಮಗನ ಮೇಲೆ ತಂದೆಯೇ ಗುಂಡು ಹಾರಿಸಿದ ಪ್ರಕರಣ ನಡೆದಿದೆ.

ಕಲಬುರಗಿ ನಗರದ ಶೆಟ್ಟಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ವಿರೇಶ ಎಂಬಾತನ ಮೇಲೆ ಆತನ ತಂದೆ ಸೋಮಶೇಖರ್ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ವೀರೇಶನ ಭುಜಕ್ಕೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವೀರೇಶ  ಪುಂಡರೊಂದಿಗೆ ಕೂಡಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ದುಡ್ಡು ಕೊಡದೇ ಇದ್ರೆ ತಾಯಿ ಮತ್ತು ತಮ್ಮನನ್ನು  ಕೊಲೆ ಮಾಡುವದಾಗಿ ಬೆದರಿಕೆ ಹಾಕಿದ್ದ. ರಾತ್ರಿ ಮನೆಯವರ ಜೊತೆ ಕುಡಿದು ಬಂದು ಗನ್ ತೆಗೆದುಕೊಂಡು ಕೊಲೆ ಮಾಡಲು ಯತ್ನ ನಡೆಸಿದ್ದ. ಹೀಗಾಗಿ ರಕ್ಷಣೆಗಾಗಿ ಮಗನ ಮೇಲೆ ಸೋಮಶೇಖರ್ ಗುಂಡು ಹಾರಿಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಹೇಳಿದ್ದಾರೆ.

ಗುಂಡು ಹಾರಿಸಿರುವ ಸೋಮಶೇಖರ್ 24 ವರ್ಷ ಬಿಎಸ್ ಎಫ್ ನಲ್ಲಿ ಕಾರ್ಯನಿರ್ವಯಿಸಿದ್ದ. ಈಗ ಕ್ಯಾಶ್ ಎಸ್ಕಾರ್ಟ್ ನಲ್ಲಿ ಕೆಲಸ ಮಾಡತ್ತಿದ್ದಾನೆ. ಸೋಮಶೇಖರ್ 6 ವರ್ಷಗಳಿಂದ ಡಬಲ್ ಬ್ಯಾರಲ್ ಲೈಸನ್ಸ್ ಗನ್ ಹೊಂದಿದ್ದಾರೆ ಎಂದು ಎಸ್ ಪಿ ತಿಳಿಸಿದ್ದಾರೆ. ಈ ಕುರಿತು ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments