Webdunia - Bharat's app for daily news and videos

Install App

ಕುಡುಕ ಮಗನಿಗೆ ಗುಂಡು ಹಾರಿಸಿದ ತಂದೆ

Webdunia
ಬುಧವಾರ, 17 ಅಕ್ಟೋಬರ್ 2018 (18:45 IST)
ಮಗನ ಮೇಲೆ ತಂದೆಯೇ ಗುಂಡು ಹಾರಿಸಿದ ಪ್ರಕರಣ ನಡೆದಿದೆ.

ಕಲಬುರಗಿ ನಗರದ ಶೆಟ್ಟಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ವಿರೇಶ ಎಂಬಾತನ ಮೇಲೆ ಆತನ ತಂದೆ ಸೋಮಶೇಖರ್ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ವೀರೇಶನ ಭುಜಕ್ಕೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವೀರೇಶ  ಪುಂಡರೊಂದಿಗೆ ಕೂಡಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ದುಡ್ಡು ಕೊಡದೇ ಇದ್ರೆ ತಾಯಿ ಮತ್ತು ತಮ್ಮನನ್ನು  ಕೊಲೆ ಮಾಡುವದಾಗಿ ಬೆದರಿಕೆ ಹಾಕಿದ್ದ. ರಾತ್ರಿ ಮನೆಯವರ ಜೊತೆ ಕುಡಿದು ಬಂದು ಗನ್ ತೆಗೆದುಕೊಂಡು ಕೊಲೆ ಮಾಡಲು ಯತ್ನ ನಡೆಸಿದ್ದ. ಹೀಗಾಗಿ ರಕ್ಷಣೆಗಾಗಿ ಮಗನ ಮೇಲೆ ಸೋಮಶೇಖರ್ ಗುಂಡು ಹಾರಿಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ಹೇಳಿದ್ದಾರೆ.

ಗುಂಡು ಹಾರಿಸಿರುವ ಸೋಮಶೇಖರ್ 24 ವರ್ಷ ಬಿಎಸ್ ಎಫ್ ನಲ್ಲಿ ಕಾರ್ಯನಿರ್ವಯಿಸಿದ್ದ. ಈಗ ಕ್ಯಾಶ್ ಎಸ್ಕಾರ್ಟ್ ನಲ್ಲಿ ಕೆಲಸ ಮಾಡತ್ತಿದ್ದಾನೆ. ಸೋಮಶೇಖರ್ 6 ವರ್ಷಗಳಿಂದ ಡಬಲ್ ಬ್ಯಾರಲ್ ಲೈಸನ್ಸ್ ಗನ್ ಹೊಂದಿದ್ದಾರೆ ಎಂದು ಎಸ್ ಪಿ ತಿಳಿಸಿದ್ದಾರೆ. ಈ ಕುರಿತು ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments