Webdunia - Bharat's app for daily news and videos

Install App

ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಮಗನನ್ನು ಮರಕ್ಕೆ ಕಟ್ಟಿ ಥಳಿತ!

Webdunia
ಶನಿವಾರ, 7 ಜನವರಿ 2023 (13:37 IST)
ಕೊಪ್ಪಳ : ತಂದೆ ಮಾಡಿದ ಸಾಲ ಸಕಾಲಕ್ಕೆ ತೀರಿಸಿಲ್ಲ ಎಂಬ ಕಾರಣಕ್ಕೆ ಸಾಲ ಕೊಟ್ಟವರು ಮಗನಿಗೆ ಶಿಕ್ಷೆ ಕೊಟ್ಟಿದ್ದಾರೆ.

ಸಾಲ ಮರು ಪಾವತಿ ಮಾಡದಿರುವುದರಿಂದ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನುಷ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ.ಹೊಸೂರು ಗ್ರಾಮದಲ್ಲಿ ನಡೆದಿದೆ.

ದೊಡ್ಡ ಬಸಪ್ಪ ಮಡಿವಾಳರ (14) ಎಂಬ ಬಾಲಕನಿಗೆ ಥಳಿಸಿದ ಆರೋಪ ಕೇಳಿ ಬಂದಿದೆ. 2022ರ ಡಿ.28 ರಂದು ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಲ್ಲ. ಇದರಿಂದ ಥಳಿತಕ್ಕೆ ಒಳಗಾದ ಬಾಲಕನ ತಾಯಿ ಮಂಜುಳಾ ಡಿ.31 ರಂದು ಎಸ್ಪಿಗೆ ದೂರು ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ತಂದೆ ಮರಿಯಪ್ಪ ಮಡಿವಾಳರ ಮಾಡಿದ ಸಾಲ ತೀರಿಸಿಲ್ಲ ಎಂದು ಸಾಲ ಕೊಟ್ಟವರು ನನ್ನ ಮಗನಿಗೆ ಥಳಿಸಿದ್ದಾರೆ ಎಂದು ಇದೀಗ ಈ ಬಗ್ಗೆ ಕನಕರಾಯ ಮಡಿವಾಳರ, ರಾಜೇಶ್ವರಿ ಮಡಿವಾಳರ, ವೀರಭದ್ರಪ್ಪ ಮಡಿವಾಳರ, ಗಂಗಮ್ಮ ಮಡಿವಾಳರ, ನಿರುಪಾದೆಪ್ಪ ಮಡಿವಾಳರ, ಬಸವರಾಜ ಮಡಿವಾಳರ ಎನ್ನುವವರ ವಿರುದ್ಧ ಬಾಲಕನ ತಾಯಿ ಮಂಜುಳಾ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments