Webdunia - Bharat's app for daily news and videos

Install App

ರಾಜ್ಯದ ಜನತೆಯ ಭಾವನೆ ಹೇಗಿದೆ ಅನ್ನೋದಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಸಾಕ್ಷಿ: ಡಿಕೆಶಿ

Webdunia
ಶುಕ್ರವಾರ, 31 ಡಿಸೆಂಬರ್ 2021 (14:57 IST)
ಬೆಂಗಳೂರು: ಇದು ಕಾಂಗ್ರೆಸ್ ಗೆಲುವಿನ ಜೊತೆಗೆ ಜನರ ಗೆಲುವು. ಹಳ್ಳಿಜನ ಅಷ್ಟೇ ಅಲ್ಲ. ಪಟ್ಟಣದ ಜನರ ಒಲವು ಕಾಂಗ್ರೆಸ್ ಕಡೆಗೆ ವಾಲುತ್ತಿದೆ. ರಾಜ್ಯದ ಜನತೆಯ ಭಾವನೆ ಹೇಗಿದೆ ಅನ್ನೋದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಇದ್ದಾಗ ಶಾಸಕರಿಗೆ ಸಹಜವಾಗಿ  ಹೆಚ್ಚಿನ ಅವಕಾಶ ಇರುತ್ತದೆ. ಆದರೆ ಅದನ್ನು ಮೀರಿ ಜನ ನಮ್ಮ ಕಡೆ ಒಲವು ತೋರಿದ್ದಾರೆ. ಜನ ನಮ್ಮ ಮೇಲೆ ವಿಶ್ವಾಸ ಇಡುತ್ತಿದ್ದಾರೆ. ಅವರ ವಿಶ್ವಾಸ ಉಳಿಸುವಂತ ಆಡಳಿತ ಮುಂದಿನ ದಿನಗಳಲ್ಲಿ ಕೊಡುತ್ತೇವೆ ಎಂದು ಹೇಳಿದರು.
ಐಟಿ, ಇಡಿ, ಬೇನಾಮಿ ಆಸ್ತಿ ವಿಚಾರದಲ್ಲಿ ಏನೇನು ಆಗುತ್ತಿದೆ. ದೆಹಲಿ ಮಟ್ಟದಲ್ಲಿ ಏನೇನು ಆಗುತ್ತಿದೆ ಎಲ್ಲಾ ಗೊತ್ತಿದೆ. ಯಾರ್ಯಾರು ದೆಹಲಿಗೆ ಹೋಗಿ ಏನು ಮಾಡುತ್ತಿದಾರೆ ಎಲ್ಲಾ ಗೊತ್ತಿದೆ. ಸಿಎಂ, ಸಚಿವರು, ಶಾಸಕರು ಅವರ ಕ್ಷೇತ್ರದಲ್ಲೆಲ್ಲಾ ಏನೇನಾಗಿದೆ ಎಲ್ಲಾ ಗೊತ್ತಿದೆಯಲ್ಲ ಎಂದರು.
ಕುಮಾರಸ್ವಾಮಿ ಮಕ್ಮಲ್ ಟೋಪಿ ಎಂಬ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಟೋಪಿ ಹಾಕಲಿ. ನಾನು ಡೈಲಿ ಪಾದಯಾತ್ರೆಗೆ ಪ್ರಾಕ್ಟೀಸ್ ಮಾಡುತ್ತಿದ್ದೇನೆ. ಹೊಸ ಶೂ ತಗೆದುಕೊಂಡಿದ್ದೇನೆ ಎಂದು ತಮ್ಮ ಶೂ ಕಡೆ ನೋಡಿಕೊಂಡು ಹೆಚ್‍ಡಿಕೆ ಬಗ್ಗೆ ವ್ಯಂಗ್ಯವಾಡಿದರು.
ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿ.27ರಂದು ಚುನಾವಣೆ ನಡೆದಿತ್ತು. 58 ಪುರಸಭೆ, 57 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಹಲವು ಕಡೆ ಇನ್ನೂ ಮತ ಎಣಿಕೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments