Webdunia - Bharat's app for daily news and videos

Install App

ನೆರೆ ಪರಿಹಾರ ನೈಜ ಸಂತ್ರಸ್ತರಿಗೆ ತಲುಪದಿದ್ದರೇ ಉಗ್ರ ಹೋರಾಟ

Webdunia
ಬುಧವಾರ, 9 ಅಕ್ಟೋಬರ್ 2019 (17:17 IST)
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೆರೆ ಪ್ರವಾಹಕ್ಕೆ ತುತ್ತಾಗಿವೆ.  ಜನರ ಜೀವನ ಅತಂತ್ರಗೊಂಡಿದೆ.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸದೇ ತಮ್ಮ ಅಧಿಕಾರದ ಕಿತ್ತಾಟದಲ್ಲಿ ತೊಡಗಿಕೊಂಡಿದ್ದಾರೆ. ನೆರೆ ಸಂತ್ರಸ್ತರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಇದೀಗ ಕೇಂದ್ರದಿಂದ ಮಧ್ಯಂತರ ಪರಿಹಾರ ಬಂದಿದ್ದು, ಅದರಲ್ಲೂ ಅವ್ಯವಹಾರಗಳು ನಡೆಯುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಸರ್ಕಾರ ನೆರೆ ಸಂತ್ರಸ್ತರ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸಿ ಅರ್ಹ ಫಲಾನುಭವಿಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು. ಹೀಗಂತ ಎಸ್.ಯು.ಸಿ.ಐ ನ ರಾಮಾಂಜನಪ್ಪ ಆಲ್ದಳ್ಳಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಳೆದ 45 ವರ್ಷಗಳಿಂದ ಕಂಡು ಕೇಳದ ಭೀಕರ ಪ್ರವಾಹಕ್ಕೆ ಜನರು ತತ್ತರಿಸಿದ್ದಾರೆ. ಜನರ ಬದುಕು ಬೀದಿಗೆ ಬಂದಿದೆ. ಈ ಸಂದರ್ಭದಲ್ಲಿ ನೆರೆ ಹಾವಳಿ ಬಂದಾಗ ಸರ್ಕಾರ ನೆರೆ ಬಂದ ಜನರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ಅಧಿಕಾರದ ಹಪಾಹಪಿಯಿಂದ ವಿಧಾನದಸಭೆಯಲ್ಲಿ ಠಿಕಾಣಿ ಹೂಡಿತು. ಜನರನ್ನು ಆಧುನಿಕ ಗುಲಾಮರಂತೆ ನೋಡಿದವು ಎಂದು ಆರೋಪಿಸಿದ್ರು.

ಇದೀಗ ಕೇಂದ್ರದಿಂದ ಮಧ್ಯಂತರ 1200 ಕೋಟಿ ನೆರೆ ಪರಿಹಾರ ಬಂದಿದೆ. ಆದರೆ ನೆರೆ ಪರಿಹಾರ ಒದಗಿಸುವಲ್ಲಿಯೂ ಭ್ರಷ್ಟಾಚಾರದ ವಾಸನೆ ಸುಳಿಯುತ್ತಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಪಾರದರ್ಶಕವಾಗಿ ನಿಜವಾದ ನೆರೆ ಸಂತ್ರಸರ ಪಟ್ಟಿ ಮಾಡಿ  ಪರಿಹಾರ ಒದಗಿಸುವ ಕೆಲಸ ಮಾಡಬೇಕೆಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments