Select Your Language

Notifications

webdunia
webdunia
webdunia
webdunia

ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭ

ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭ
ದಾವಣಗೆರೆ , ಮಂಗಳವಾರ, 6 ಜೂನ್ 2023 (10:16 IST)
ದಾವಣಗೆರೆ : ನೂತನ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
 
ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ. ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ಶವಗಳ ಮೇಲೆ ಅತ್ಯಾಚಾರ ಶಿಕ್ಷಾರ್ಹಗೊಳಿಸಿ, ಕೇಂದ್ರಕ್ಕೆ ಹೈಕೋರ್ಟ್ ಸೂಚನೆ