ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು, ಬೆಂಬಲ ಕೇಳಿದ ಕೈ ಅಭ್ಯರ್ಥಿ ಸೌಮ್ಯ ರೆಡ್ಡಿ

Sampriya
ಮಂಗಳವಾರ, 2 ಏಪ್ರಿಲ್ 2024 (18:03 IST)
Photo Courtesy X
ಬೆಂಗಳೂರು: ಸೋಮವಾರ ಅಬ್ಬರದ ಮೆರವಣಿಗೆ ನಂತರ ನಾಮಪತ್ರ ಸಲ್ಲಿಕೆ ಮಾಡಿದ್ದ ಬೆಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇದು ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು, ಬೆಂಬಲವಿರಲಿ ಎಂದು ಕೇಳಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾಗರದಂತೆ ಸೇರಿದ್ದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳ ಜಯಘೋಷದ ನಡುವೆ ಹೆಜ್ಜೆ ಹಾಕುತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದೆ.

ಬದಲಾವಣೆಯ ಪಯಣಕ್ಕೆ ಹಿರಿಯರು, ಕಿರಿಯರೆನ್ನದೆ ಅಪಾರ ಸಂಖ್ಯೆಯಲ್ಲಿ ಆಗಮಿಸಿ, ಬೆಂಬಲಿಸಿದವರೆಲ್ಲರಿಗೂ ನಾನು ಆಭಾರಿ.

ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು, ಈ ಸುದೀರ್ಘ ಪಯಣದಲ್ಲಿ ನಿಮ್ಮ ಬೆಂಬಲ ಸದಾ ನನ್ನೊಂದಿಗಿರಲಿ.

ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶ್ರೀ ಎಂ. ಕೃಷ್ಣಪ್ಪ, ಶ್ರೀ ಆರ್.ವಿ. ದೇವರಾಜ್, ಶ್ರೀ ಪ್ರಿಯಾಕೃಷ್ಣ, ಶ್ರೀ ಯು.ಬಿ. ವೆಂಕಟೇಶ್, ಶ್ರೀ ಉಮಾಪತಿ ಗೌಡ, ಶ್ರೀ ರಘುನಾಥ್‌ ನಾಯ್ಡು, ಶ್ರೀ ಆರ್. ವಿ ಯುವರಾಜ್  ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರ ಉಪಸ್ಥಿತಿ ನನ್ನ ವಿಶ್ವಾಸವನ್ನು ನೂರ್ಮಡಿಗೊಳಿಸಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments