Webdunia - Bharat's app for daily news and videos

Install App

ಕೇಸರಿ ಧ್ವಜ ಹಾರಿಸಿದ್ದ ಸರಕಾರಿ ಕಾಲೇಜಿನ ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ

Webdunia
ಬುಧವಾರ, 9 ಫೆಬ್ರವರಿ 2022 (20:59 IST)
ಕೇಸರಿ ಶಾಲು ಧರಿಸಿ ಬಂದಿದ್ದ ಕೆಲವು ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದ ಇಲ್ಲಿನ ಬಾಪೂಜಿ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಎನ್ಎಸ್ ಯುಐ ಕಾರ್ಯಕರ್ತರು ಇಂದು ಬೆಳಗ್ಗೆ ರಾಷ್ಟ್ರ ಧ್ವಜಾರೋಹಣಗೈದರು.
ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಇಲ್ಲಿನ ಬಾಪೂಜಿ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಬೆಳಗ್ಗೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದ ಕೆಲವು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿರುವ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸರಿ ಧ್ವಜ ಹಾರಿಸಿದ್ದ ಅದೇ ಧ್ವಜಸ್ತಂಭದಲ್ಲಿ ಇಂದು ಬೆಳಗ್ಗೆ ಶಿವಮೊಗ್ಗ ಎನ್ಎಸ್ ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜವನ್ನು ಹಾರಿಸಿದರು.
ವಿದ್ಯಾರ್ಥಿಗಳು ಹಿಜಾಬ್ - ಕೇಸರಿ ವಿಚಾರವನ್ನು ಬದಿಗಿಟ್ಟು ತರಗತಿಗೆ ಹಾಜರಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಇದೇವೇಳೆ ಎನ್ಎಸ್ ಯುಐ ಕಾರ್ಯಕರ್ತರು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments