Webdunia - Bharat's app for daily news and videos

Install App

ತುಂಬಿ ಹರಿಯುತ್ತಿರುವ ಮಾರ್ಕಾಂಡೇಯ ನದಿ: ಸಾವಿರಾರು ಎಕರೆ ಜಮೀನು ಜಲಾವೃತ

Webdunia
ಮಂಗಳವಾರ, 17 ಜುಲೈ 2018 (16:46 IST)
ಕುಂದಾನಗರಿಯಲ್ಲಿಯೂ ಮಳೆರಾಯ ತನ್ನ ಆರ್ಭಟ ಮುಂದುವರಿಸಿದ್ದಾನೆ. ಹೀಗಾಗಿ ಎಡೆಬಿಡದೆ ಸುರಿಯುತ್ತಿರು ಮಳೆಯಿಂದ ಮಾರ್ಕಾಂಡೇಯ ನದಿ ತುಂಬಿ ಹರಿಯುತ್ತಿದೆ. ಸಾವಿರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಜಲಾವೃತವಾಗಿದೆ.
ಕುಂದಾನಗರಿ ಬೆಳಗಾವಿ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ.

ಬೆಳಗಾವಿ ನಗರ ಸೇರಿದಂತೆ ಜಿಲ್ಲಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆರಾಯ ತನ್ನ ಸುರಿಯುವಿಕೆಯನ್ನು ಮುಂದುವರೆಸಿದ್ದಾನೆ. ನಿರಂತರ ಮಳೆಯಿಂದಾಗಿ ಗರಿಷ್ಠ ಮಟ್ಟ ಮೀರಿ ಮಾರ್ಕಾಂಡೆಯ ನದಿ ತುಂಬಿ ಹರಿಯುತ್ತಿದೆ. ನದಿಯಿಂದ ಹೆಚ್ಚಾದ ನೀರಿನಿಂದ ಸಾವಿರಾರು ಎಕರೆ ಕೃಷಿ ಜಮೀನು ಜಲಾವೃತವಾಗಿದೆ. ಬೆಳಗಾವಿ ತಾಲೂಕಿನ ಕಂಗ್ರಾಂಳಿ ಮತ್ತು ಅಲತಗಾ ಗ್ರಾಮಗಳ ಮಧ್ಯದ ಜಮೀನು ಜಲಾವೃತಗೊಂಡಿದ್ದು, ಬೆಳೆ ಹಾನಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಮುಂಗಾರಿನಲ್ಲಿ ಬಿತ್ತನೆ ಮಾಡಿ ಬೆಳೆ ಬೆಳೆಯುವ ಕನಸು ಹೊತ್ತಿದ್ದ ರೈತ ಕಂಗಾಲಾಗುವಂತಾಗಿದೆ. ಬೆಳಗಾವಿ ನಗರದಲ್ಲೂ ಮಳೆಯ ಅಬ್ಬರದಿಂದ ಅಲ್ಲಲ್ಲಿ ರಸ್ತೆ ಮೇಲೆ ನೀರು ಬಂದು ಅವಾಂತರ ಸೃಷ್ಟಿಯಾಗುತ್ತಿದೆ. ವಾಹನ ಸಂಚಾರ, ಜನಜೀವನ ದುಸ್ತರಗೊಳ್ಳುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

ಮುಂದಿನ ಸುದ್ದಿ
Show comments