Webdunia - Bharat's app for daily news and videos

Install App

ತುಂಬಿ ಹರಿಯುತ್ತಿರುವ ಮಾರ್ಕಾಂಡೇಯ ನದಿ: ಸಾವಿರಾರು ಎಕರೆ ಜಮೀನು ಜಲಾವೃತ

Webdunia
ಮಂಗಳವಾರ, 17 ಜುಲೈ 2018 (16:46 IST)
ಕುಂದಾನಗರಿಯಲ್ಲಿಯೂ ಮಳೆರಾಯ ತನ್ನ ಆರ್ಭಟ ಮುಂದುವರಿಸಿದ್ದಾನೆ. ಹೀಗಾಗಿ ಎಡೆಬಿಡದೆ ಸುರಿಯುತ್ತಿರು ಮಳೆಯಿಂದ ಮಾರ್ಕಾಂಡೇಯ ನದಿ ತುಂಬಿ ಹರಿಯುತ್ತಿದೆ. ಸಾವಿರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಜಲಾವೃತವಾಗಿದೆ.
ಕುಂದಾನಗರಿ ಬೆಳಗಾವಿ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ.

ಬೆಳಗಾವಿ ನಗರ ಸೇರಿದಂತೆ ಜಿಲ್ಲಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆರಾಯ ತನ್ನ ಸುರಿಯುವಿಕೆಯನ್ನು ಮುಂದುವರೆಸಿದ್ದಾನೆ. ನಿರಂತರ ಮಳೆಯಿಂದಾಗಿ ಗರಿಷ್ಠ ಮಟ್ಟ ಮೀರಿ ಮಾರ್ಕಾಂಡೆಯ ನದಿ ತುಂಬಿ ಹರಿಯುತ್ತಿದೆ. ನದಿಯಿಂದ ಹೆಚ್ಚಾದ ನೀರಿನಿಂದ ಸಾವಿರಾರು ಎಕರೆ ಕೃಷಿ ಜಮೀನು ಜಲಾವೃತವಾಗಿದೆ. ಬೆಳಗಾವಿ ತಾಲೂಕಿನ ಕಂಗ್ರಾಂಳಿ ಮತ್ತು ಅಲತಗಾ ಗ್ರಾಮಗಳ ಮಧ್ಯದ ಜಮೀನು ಜಲಾವೃತಗೊಂಡಿದ್ದು, ಬೆಳೆ ಹಾನಿ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ಮುಂಗಾರಿನಲ್ಲಿ ಬಿತ್ತನೆ ಮಾಡಿ ಬೆಳೆ ಬೆಳೆಯುವ ಕನಸು ಹೊತ್ತಿದ್ದ ರೈತ ಕಂಗಾಲಾಗುವಂತಾಗಿದೆ. ಬೆಳಗಾವಿ ನಗರದಲ್ಲೂ ಮಳೆಯ ಅಬ್ಬರದಿಂದ ಅಲ್ಲಲ್ಲಿ ರಸ್ತೆ ಮೇಲೆ ನೀರು ಬಂದು ಅವಾಂತರ ಸೃಷ್ಟಿಯಾಗುತ್ತಿದೆ. ವಾಹನ ಸಂಚಾರ, ಜನಜೀವನ ದುಸ್ತರಗೊಳ್ಳುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments