Webdunia - Bharat's app for daily news and videos

Install App

ನಿಲ್ಲೊಲ್ಲ ಎಂದಿದ್ದೆ ಆದರೆ ಒತ್ತಡ ಹೆಚ್ಚಾಗಿದೆ ಎಂದ ಮಾಜಿ ಸಚಿವ

Webdunia
ಶುಕ್ರವಾರ, 15 ಮಾರ್ಚ್ 2019 (18:19 IST)
ಈ ಹಿಂದೆ ಚುನಾವಣೆ ಸಾಕಾಗಿದೆ ನಿಲ್ಲೊಲ್ಲ ಅಂದಿದ್ದೆ. ಮತ್ತೆ ಒತ್ತಡ ಹೆಚ್ಚಾಗ್ತಿದೆ. ಬಹಳ ಒತ್ತಡದಿಂದ ನಿಲ್ಲಲೇಬೇಕು‌ ಅಂತಿದ್ದಾರೆ. 17 ಜನ ಆಕಾಂಕ್ಷಿಗಳಿದ್ದಾರೆ, ಅವರೆಲ್ಲರೂ ಒತ್ತಡ ಹೇರಿದ್ದಾರೆ. ಹಾಗಾಗಿ ಇವತ್ತು ಪಕ್ಷದ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದೀನಿ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.

ಶ್ರೀನಿವಾಸ ಪ್ರಸಾದ್ ಹೇಳಿಕೆ ನೀಡಿದ್ದು, ಚಾಮರಾಜನಗರದಿಂದ ಸ್ಪರ್ಧೆಗೆ 17 ಆಕಾಂಕ್ಷಿಗಳಿದ್ದರು. ಹಾಗಾಗಿ ನಾನೂ ಕೂಡ ಚುನಾವಣಾ ರಾಜಕಾರಣ ಬೇಡ ಎಂದು ನಿರ್ಧರಿಸಿದ್ದೆ. ಆದರೆ ಅಷ್ಟೂ ಆಕಾಂಕ್ಷಿಗಳು ನನ್ನನ್ನು ಸ್ಪರ್ಧಿಸಲು ಒತ್ತಾಯಿಸಿ ತಾವು ಹಿಂದೆ ಸರಿದಿದ್ದಾರೆ. ಬೆಂಬಲಿಗರ ಒತ್ತಾಯಕ್ಕೆ ಮಣಿದು ಸ್ಪರ್ಧೆಗೆ ಒಪ್ಪಿದ್ದೇನೆ. ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇನೆ. ಅವರೊಂದಿಗೆ ಚರ್ಚೆಯ ನಂತರ ದುಗುಡದಲ್ಲಿದ್ದ ನಾನು ಒಂದು ರೀತಿಯಲ್ಲಿ ನಿರಾಳವಾಗಿದ್ದೇನೆ.

ನನ್ನ ಬೆಂಬಲಿಗರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ‌ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ. ಚಾಮರಾಜನಗರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ವಿಚಾರ ಅಂತಿಮವಾಗಿ ನಿರ್ಧಾರ ಪಕ್ಷಕ್ಕೆ ಬಿಟ್ಟದ್ದು. ಯಡಿಯೂರಪ್ಪ ಜೊತೆ ಮಾತುಕತೆ ನಂತರ ಸಮಾಧಾನ‌ ಆಗಿದೆ. ಐವತ್ತು ವರ್ಷ ಕೆಲಸ ಮಾಡಿದ ಅನುಭವ ಇದೆ. ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ನಡೆದುಕೊಳ್ತೇನೆ ಎಂದು ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments