Webdunia - Bharat's app for daily news and videos

Install App

ಜೆಡಿಎಸ್-ಕಾಂಗ್ರೆಸ್ ನವರು ಬಟ್ಟೆ ಬಿಚ್ಚಿ ಕುಣಿಯಲಿ; ನಮಗೆ ಸಂಬಂಧವಿಲ್ಲ ಎಂದ ಮಾಜಿ ಸಚಿವ

Webdunia
ಸೋಮವಾರ, 13 ಆಗಸ್ಟ್ 2018 (15:03 IST)
ರಾಜ್ಯದ ಸ್ಥಳೀಯ ಸಂಸ್ಥೆ ಚುನವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಹೊಂದಾಣಿಕೆ ಮುಕ್ತವಾಗಿ ಚುನಾವಣೆಗೆ ಮುಂದಾಗಿರೋದಕ್ಕೆ ಅವರು ಏನಾದ್ರೂ ಮಾಡಿಕೊಳ್ಳಲಿ. ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ ನಮಗೆ ಸಂಬಂಧ ಇಲ್ಲ ಅಂತಾ ಮಾಜಿ ಸಚಿವ ಹೇಳಿದ್ದಾರೆ.

ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಏನಾದ್ರೂ ಮಾಡಿಕೊಂಡು ಬಟ್ಟೆ ಬೇಕಾದರೆ ಬಿಚ್ಚಿ ಕುಣೀಲಿ. ನಮಗೆ ಸಂಬಂಧವಿಲ್ಲ ಎಂದು ಮಾಜಿ ಸಚಿವ ಸೋಮಣ್ಣ ತುಮಕೂರಿನಲ್ಲಿ ವ್ಯಂಗ್ಯವಾಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ  ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ್ರು.

ನಮ್ಮ ಕೆಲಸ ನಾವು ಮಾಡ್ತೀವಿ ಹೊಂದಾಣಿಕೆ ಮಾಡೋದು ಬಿಡೋದು ಅವರಿಗೆ ಬಿಟ್ಟಿದ್ದು. ಬಿಜೆಪಿ ಏಕಾಂಗಿಯಾಗಿ ಹೋರಾಟ ಮಾಡಿ ಗೆಲುವು ಸಾಧಿಸಲಿದೆ ಅಂದ್ರು. ಇನ್ನೂ ಸಿಎಂ ನಾಟಿ ವಿಚಾರ ಪ್ರಸ್ತಾಪಿಸಿ, ಹೆಚ್.ಡಿ. ಕುಮಾರಸ್ವಾಮಿ ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ. ಇನ್ನೊಬ್ಬರ ಜೊತೆಯಲ್ಲಿ ಎರವಲು ವ್ಯವಸ್ಥೆಯಲ್ಲಿ ಇದ್ದಾರೆ. ಆದರೂ ರೈತರಿಗೆ ಆತ್ಮಸ್ಥೈರ್ಯ ತುಂಬುತ್ತಿನಿ ಅಂತಾರೆ. ಅದು ಗಿಮಿಕ್ಕೋ? ಮತ್ತೊಂದೋ? ಗೊತ್ತಿಲ್ಲ. 30 ಜಿಲ್ಲೆಗೂ ಹೋಗ್ತಿನಿ ಅಂತಾರೆ. ಕಾದು ನೋಡೋಣ ಎಲ್ಲೆಲ್ಲಿ ನಾಟಿ ಹಾಕ್ತಾರೆ ಅಂತ ಟೀಕೆ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments