Webdunia - Bharat's app for daily news and videos

Install App

ಸ್ಥಳೀಯ ಸಂಸ್ಥೆ: ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುತ್ತೇವೆ ಎಂದ ಮಾಜಿ ಪ್ರಧಾನಿ

Webdunia
ಮಂಗಳವಾರ, 4 ಸೆಪ್ಟಂಬರ್ 2018 (14:07 IST)
ಅತಂತ್ರವಾಗಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದರ ಮೂಲಕ ಬಿಜೆಪಿಯನ್ನು ಹೊರಗಿಡುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ನಮ್ಮ ಪಕ್ಷ ಹಾಸನದಲ್ಲಿ ಮೆಜಾರಿಟಿ ಇದೆ. ಮೈಸೂರು ಮತ್ತು ತುಮಕೂರಿನಲ್ಲಿ ಇಬ್ಬರು ಸೇರಿ ಬಿಜೆಪಿಯನ್ನು ಹೊರಗಿಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಯಾರೊಂದಿಗೂ ನಾನು ಮಾತುಕತೆ ನಡೆಸಿಲ್ಲ. ಸದ್ಯ ಸಿದ್ದರಾಮಯ್ಯನವರು ವಿದೇಶಕ್ಕೆ ಹೋಗಿದ್ದಾರೆ. ಮೈಸೂರಲ್ಲಿ  ಬಿಜೆಪಿಯವರನ್ನ ಹೊರಗಿಡಲು ನಾವು ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡುತ್ತೇವೆ. ರಾಜ್ಯದ ಎಲ್ಲಾ ಕಡೆ ಇದೇ ರೀತಿ ಮಾಡಿಕೊಳ್ಳುತ್ತೇವೆ ಎಂದರು.

ನಗರ ಪ್ರದೇಶದಲ್ಲಿ ಒಂದೇ ರೀತಿಯ ಸಮಾಜ ಇರೋದಿಲ್ಲ. ಎಲ್ಲಾ ರೀತಿಯ ಜನಾಂಗಗಳು ಇರುತ್ತವೆ. ಲೋಕಸಭಾ ಚುನಾವಣೆ ಬೇರೆ, ಸ್ಥಳೀಯ ಸಂಸ್ಥೆ ಚುನಾವಣೆ ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಸದ್ಯ ರಾಹುಲ್ ಗಾಂಧಿಯವರು ಕೈಲಾಸ ಯಾತ್ರೆಯಲ್ಲಿ ದ್ದಾರೆ. ಅವರು ಬಂದ ನಂತರ ಇದರ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದಿದ್ದಾರೆ.

ಸಂಪುಟ ವಿಸ್ತರಣೆ ಸಾಧ್ಯತೆ ಇದೆ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಗೌಡರು, ಇದೆಲ್ಲಾ ಸರ್ಕಾರ ದಲ್ಲಿರುವ ಪಾಲುದಾರರಿಗೆ ಸೇರಿದ್ದು. ಹೆಚ್ಚಿನ ಪಾಲುದಾರಿಕೆ ನಮಗಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಈಗಾಗಲೇ ಹೇಳಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

ಮುಂದಿನ ಸುದ್ದಿ
Show comments