ದೇಶದ ಜನ್ರು ನನ್ನನ್ನು ಎಲೆಕ್ಷನ್ ಗೆ ನಿಲ್ಸಿತ್ತಿದ್ದಾರೆ ಎಂದ ಮಾಜಿ ಪ್ರಧಾನಿ

Webdunia
ಸೋಮವಾರ, 18 ಮಾರ್ಚ್ 2019 (17:45 IST)
ನಾನು ಚುನಾವಣೆಗೆ ನಿಲ್ಲುವ ತೀರ್ಮಾನ ಮಾಡಿಲ್ಲ. ಆದರೆ ದೇಶದ ಜನರು ನನ್ನನ್ನ ಚುನಾವಣೆಗೆ ನಿಲ್ಲಿಸಲು ತೀರ್ಮಾನ ಮಾಡಿದ್ದಾರೆ ಅಂತ ಮಾಜಿ ಪ್ರಧಾನಿ ಹೇಳಿದ್ದಾರೆ.

ಕಳೆದ 14 ವರ್ಷಗಳಲ್ಲಿ ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ. ನನಗೆ ನೋವಿದೆ. ಮೋದಿಯವರು ಮತ್ತೆ ಅಧಿಕಾರ ಪಡೆಯಲು ಹಪಾಪಿಸುತ್ತಿದ್ದಾರೆ. ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಲ್ಲಿ ಮೋದಿ ಎಐಡಿಎಂಕೆ ಹಾಗೂ ಶಿವಸೇನಾ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಮಧುಬಂಗಾರಪ್ಪ ಪರ ಪ್ರಚಾರ ಮಾಡಲು ನಾನು ಬರುತ್ತೇನೆ. ಜನರ ಬಳಿ ನಾನು ಮತ ಭೀಕ್ಷೆ ಬೇಡುತ್ತೇನೆ. ಹೀಗಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಚೀನಾ ದೇಶದ ಅಧ್ಯಕ್ಷರು 35 ವರ್ಷ ಭಾರತಕ್ಕೆ ಬಂದಿರಲಿಲ್ಲ. ನಾನು ಚೀನಾದ ರಾಯಭಾರಿಗೆ ತಿಳಿಸಿ ಭಾಂದವ್ಯ ಬೆಳೆಬೇಕು ಎನ್ನುವ ಕಾರಣಕ್ಕೆ ಅಧ್ಯಕ್ಷರು ಭಾರತಕ್ಕೆ ಬರುವಂತೆ ಹೇಳಿದ್ದೆ. 35 ವರ್ಷದ ಬಳಿಕ ಚೀನಾದ ಅಧ್ಯಕ್ಷರು ಬಂದಿದ್ದ ಕಾರಣ ನಾನೇ ಏರ್ ಪೊರ್ಟ್ ಗೆ ಹೋಗಿ ಬರಮಾಡಿಕೊಂಡಿದ್ದೆ. ನನಗೆ ರಾಜಕೀಯ ವ್ಯಾಮೋಹವಿಲ್ಲ, ನಾನು ಜಾತಿ ವಿರೋಧಿ ಅಲ್ಲ. ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿಯವರು ಅಪಹಾಸ್ಯ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು ಮುಸ್ಲಿಂ ಮಹಿಳೆಯರನ್ನ ಮೇಯರ್ ಆಗಿ ಮಾಡಿದ್ದು ದೇವೇಗೌಡರು ಎಂದ ಅವರು, ಮಧು ಬಂಗಾರಪ್ಪ ಚುನಾವಣೆ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಈಗ ನಡೆಯುತ್ತಿರುವ ಮಹಾ ಚುನಾವಣೆಯಲ್ಲಿ ಮಧು ಬಂಗಾರಪ್ಪ ಗೆಲ್ಲಬೇಕು. ದೇಶಕ್ಕೆ ಒಂದು ಸಂದೇಶ ರವಾನಿಸಬೇಕು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments