Webdunia - Bharat's app for daily news and videos

Install App

ದೀಪಾವಳಿ ಹಬ್ಬದ ದಿನವೇ ಮರ್ಯಾದಾ ಹತ್ಯೆಗೆ ನಾಲ್ಕು ತಿಂಗಳ ಗರ್ಭಿಣಿ ಬಲಿ

Webdunia
ಬುಧವಾರ, 7 ನವೆಂಬರ್ 2018 (14:57 IST)
ದೀಪಾವಳಿ ಹಬ್ಬದ ದಿನವೇ ಮರ್ಯಾದಾ ಹತ್ಯೆಗೆ ನಾಲ್ಕು ತಿಂಗಳ ಗರ್ಭಿಣಿ ಬಲಿಯಾದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಯಲಗೂರ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ವೇಳೆ 22 ವರ್ಷದ ರೇಣುಕಾಳನ್ನು ಕತ್ತು ಕುಯ್ದು ಕೊಲೆ ಮಾಡಿ ಸಂಬಂಧಿಕರು ಪರಾರಿಯಾಗಿದ್ದಾರೆ.

ಕಳೆದ ಎರಡು ವರ್ಷದ ಹಿಂದೆ ಅನ್ಯ ಜಾತಿಯ ಯುವಕ ಶಂಕರನನ್ನು ಪ್ರೀತಿಸಿ ಮದುವೆಯಾಗಿದ್ದಳು ರೇಣುಕಾ.
ರಾಯಚೂರ ಜಿಲ್ಲೆಯ ಶಿರವಾರ ಗ್ರಾಮದ ಶಂಕರ ಹಾಗೂ ಕ್ಯಾದಿಗೇರಿ ಗ್ರಾಮದ ರೇಣುಕಾ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳಾಗಿದ್ದಾರೆ.

ಮದುವೆ ಬಳಿಕ ಯಲಗೂರನಲ್ಲಿ ಬಂದು ವಾಸವಾಗಿದ್ದು ಜೀವನ ನಡೆಸುತ್ತಿದ್ದರು. ಯುವಕ‌ ಶಂಕರ ಸ್ಥಳೀಯ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದನು. ತಾಯಿಯ ಮೇಲೆ ಪ್ರೀತಿ ಇಟ್ಟುಕೊಂಡಿದ್ದ ರೇಣುಕಾ ತಾಯಿಯ ಜೀವ ನೆನೆಸುತ್ತಿದೆ ಎಂದು ತವರು ಮನೆಗೆ ಕರೆ ಮಾಡಿದ್ದಳು. ರೇಣುಕಾಳನ್ನು ನೋಡುವ ನೆಪ ಮಾಡಿ ವಾರದ ಹಿಂದೆ ಬಂದು ಯಲಗೂರನಲ್ಲಿಯೇ ಉಳಿದುಕೊಂಡಿದ್ದರು ಸಂಬಂಧಿಕರು.

ರೇಣುಕಾ ತಾಯಿ, ರೇಣುಕಾ ಸಹೋದರ ಹಾಗೂ ರೇಣುಕಾ ತಂಗಿಯ ಗಂಡ ಬಂದಿದ್ದರು. ಶಂಕರ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋದ ಸಮಯದಲ್ಲಿ ರೇಣುಕಾಳ ಕತ್ತು ಸೀಳಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. 
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments