Webdunia - Bharat's app for daily news and videos

Install App

ದೀಪಾವಳಿ ಹಬ್ಬದ ದಿನವೇ ಮರ್ಯಾದಾ ಹತ್ಯೆಗೆ ನಾಲ್ಕು ತಿಂಗಳ ಗರ್ಭಿಣಿ ಬಲಿ

Webdunia
ಬುಧವಾರ, 7 ನವೆಂಬರ್ 2018 (14:57 IST)
ದೀಪಾವಳಿ ಹಬ್ಬದ ದಿನವೇ ಮರ್ಯಾದಾ ಹತ್ಯೆಗೆ ನಾಲ್ಕು ತಿಂಗಳ ಗರ್ಭಿಣಿ ಬಲಿಯಾದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಯಲಗೂರ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ವೇಳೆ 22 ವರ್ಷದ ರೇಣುಕಾಳನ್ನು ಕತ್ತು ಕುಯ್ದು ಕೊಲೆ ಮಾಡಿ ಸಂಬಂಧಿಕರು ಪರಾರಿಯಾಗಿದ್ದಾರೆ.

ಕಳೆದ ಎರಡು ವರ್ಷದ ಹಿಂದೆ ಅನ್ಯ ಜಾತಿಯ ಯುವಕ ಶಂಕರನನ್ನು ಪ್ರೀತಿಸಿ ಮದುವೆಯಾಗಿದ್ದಳು ರೇಣುಕಾ.
ರಾಯಚೂರ ಜಿಲ್ಲೆಯ ಶಿರವಾರ ಗ್ರಾಮದ ಶಂಕರ ಹಾಗೂ ಕ್ಯಾದಿಗೇರಿ ಗ್ರಾಮದ ರೇಣುಕಾ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳಾಗಿದ್ದಾರೆ.

ಮದುವೆ ಬಳಿಕ ಯಲಗೂರನಲ್ಲಿ ಬಂದು ವಾಸವಾಗಿದ್ದು ಜೀವನ ನಡೆಸುತ್ತಿದ್ದರು. ಯುವಕ‌ ಶಂಕರ ಸ್ಥಳೀಯ ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದನು. ತಾಯಿಯ ಮೇಲೆ ಪ್ರೀತಿ ಇಟ್ಟುಕೊಂಡಿದ್ದ ರೇಣುಕಾ ತಾಯಿಯ ಜೀವ ನೆನೆಸುತ್ತಿದೆ ಎಂದು ತವರು ಮನೆಗೆ ಕರೆ ಮಾಡಿದ್ದಳು. ರೇಣುಕಾಳನ್ನು ನೋಡುವ ನೆಪ ಮಾಡಿ ವಾರದ ಹಿಂದೆ ಬಂದು ಯಲಗೂರನಲ್ಲಿಯೇ ಉಳಿದುಕೊಂಡಿದ್ದರು ಸಂಬಂಧಿಕರು.

ರೇಣುಕಾ ತಾಯಿ, ರೇಣುಕಾ ಸಹೋದರ ಹಾಗೂ ರೇಣುಕಾ ತಂಗಿಯ ಗಂಡ ಬಂದಿದ್ದರು. ಶಂಕರ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋದ ಸಮಯದಲ್ಲಿ ರೇಣುಕಾಳ ಕತ್ತು ಸೀಳಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. 
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments