Publish Date: Sun, 21 Oct 2018 (14:33 IST)
Updated Date: Sun, 21 Oct 2018 (14:35 IST)
ತ್ರಿವಿಧ ದಾಸೋಹಿ, ಹೃದಯಾಘಾತದಿಂದ ಲಿಂಗೈಕ್ಯರಾದ ಗದಗ-ಡಂಬಳ ತೋಂಟದಾರ್ಯ ಮಠದ ಪೀಠಾಧಿಪತಿ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಅಂತ್ಯಕ್ರಿಯೆ ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸೇರಿದಂತೆ ಹಲವಾರು ನಾಯಕರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ವಿವಿಧ ಮಠಾಧೀಶರು ತೋಂಟದಾರ್ಯ ಮಠಕ್ಕೆ ಭೇಟಿ ನೀಡಿ ಅಗಲಿದ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು.