Webdunia - Bharat's app for daily news and videos

Install App

ಆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ?

Webdunia
ಶನಿವಾರ, 16 ಫೆಬ್ರವರಿ 2019 (12:48 IST)
ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಹಾರಾಣಿ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಬಾಪೂಜಿನಗರದ ದೀಪಾ(21) ಆತ್ಮಹತ್ಯೆ ಮಾಡಿಕೊಂಡವರು. ಮಹಾರಾಣಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ದೀಪಾ ಅಪ್ಪ ಅಮ್ಮ ಇಲ್ಲದಿದ್ದರಿಂದ ಕಳೆದ ಐದಾರು ವರ್ಷಗಳಿಂದಲೂ ಬಾಪೂಜಿನಗರದಲ್ಲಿರುವ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದಳು.

ದೊಡ್ಡಮ್ಮನ ಮನೆಯ ಪಕ್ಕದಲ್ಲೇ ಇದ್ದ ಸುರೇಶ್ ಎಂಬಾತನೊಂದಿಗೆ ದೀಪಾಳಿಗೆ ಪ್ರೇಮಾಂಕುರವಾಗಿತ್ತು. ಹಲವು ವರ್ಷಗಳಿಂದ ಮನೆಯವರಿಗೂ ಗೊತ್ತಿಲ್ಲದೆ ದೀಪಾ ಹಾಗೂ ಸುರೇಶ್ ಪ್ರೀತಿಸುತ್ತಿದ್ದರು. 4 ದಿನಗಳ ಹಿಂದೆ ಸುರೇಶ್ ಮತ್ತೊಂದು ಯುವತಿಯನ್ನು ಕರೆದುಕೊಂಡು ಮನೆ ಬಿಟ್ಟು ಓಡಿ ಹೋಗಿದ್ದಾನೆ.

ಇದರಿಂದ ಆಕ್ರೋಶಗೊಂಡ ದೀಪಾ ರಾತ್ರಿ ಸುರೇಶ್ಗೆ ಕರೆ ಮಾಡಿ ಸಾಕಷ್ಟು ವಾಗ್ವಾದ ನಡೆಸಿದ್ದಾಳೆ. ಆದರೆ ಸುರೇಶ್ ನಾನು ನಿನ್ನನ್ನ ಪ್ರೀತಿಸಿಲ್ಲ, ಮದುವೆಯೂ ಆಗಲ್ಲ. ನಾನು ಬೇರೆ ಹುಡುಗಿಯನ್ನ ಮದುವೆಯಾಗಿದ್ದೇನೆ ಎಂದಿದ್ದಾನೆ. ಆತನ ಮಾತಿನಿಂದ ನೊಂದ ದೀಪಾ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments